ಕರ್ನಾಟಕ

karnataka

ETV Bharat / state

ಕೊರೊನಾ ಶಂಕಿತ ವ್ಯಕ್ತಿ ಸಾವು...ವೈದ್ಯರು,ಪೊಲೀಸರ ಸಮ್ಮುಖದಲ್ಲಿ ಅಂತ್ಯಕ್ರಿಯೆ - Corona suspected dead in Bidar

ತಮ್ಮ ಜಮೀನಿನಲ್ಲಿ ಕ್ವಾರಂಟೈನ್​​​​ನಲ್ಲಿದ್ದ ಬೀದರ್​​​​ ಬಸವಕಲ್ಯಾಣದ ಕೊರೊನಾ ಶಂಕಿತ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ. ಪೊಲೀಸ್ ಹಾಗೂ ವೈದ್ಯರ ಸಮ್ಮುಖದಲ್ಲಿ ಈತನ ಅಂತ್ಯಕ್ರಿಯೆ ನೆರವೇರಿದೆ.

Corona suspected dead in Basavakalyana
ಕೊರೊನಾ ಶಂಕಿತ ವ್ಯಕ್ತಿ ಸಾವು

By

Published : May 28, 2020, 10:37 PM IST

ಬಸವಕಲ್ಯಾಣ(ಬೀದರ್​):ತಾಲೂಕಿನ ಗುಂಡೂರ ಗ್ರಾಮದಲ್ಲಿ ಕೊರೊನಾ ಶಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 45 ವರ್ಷದ ಈ ವ್ಯಕ್ತಿ ಬೀದರ್‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಕೋವಿಡ್-19 ವಿಧಿ, ವಿಧಾನಗಳ ಪ್ರಕಾರ ಸಾವನ್ನಪ್ಪಿದ ವ್ಯಕ್ತಿಯ ಅಂತ್ಯಕ್ರಿಯೆಯನ್ನು ವೈದ್ಯರ ಸಮ್ಮುಖದಲ್ಲಿ ಗ್ರಾಮದಲ್ಲೇ ನೆರವೇರಿಸಲಾಗಿದೆ.

ಬೀದರ್​​​ನಲ್ಲಿ ಕೊರೊನಾ ಶಂಕಿತ ವ್ಯಕ್ತಿ ಸಾವು

ಹೆಚ್‌ಐವಿ ಸೋಂಕಿಗೆ ಒಳಗಾಗಿದ್ದ ಈ ವ್ಯಕ್ತಿ ಮಹಾರಾಷ್ಟ್ರದ ಮುಂಬೈನಲ್ಲಿ ಚಾಲಕ ವೃತ್ತಿಯಲಿದ್ದ. ಕಳೆದ 13 ದಿನಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ ವ್ಯಕ್ತಿಯನ್ನು ಆತನ ಜಮೀನಿನಲ್ಲಿ ಕುಟುಂಬದಿಂದ ಪ್ರತ್ಯೇಕವಾಗಿ ಇಡಲಾಗಿತ್ತು. ಆದರೆ ಕಳೆದ 3 ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾದ ಕಾರಣ ಈತನನ್ನು ಬೀದರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಹೆಚ್‌ಐವಿಯೊಂದಿಗೆ ಕೊರೊನಾ ಶಂಕೆ ಹಿನ್ನೆಲೆ ಈತನ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಈತ ಮೃತಪಟ್ಟಿದ್ದಾನೆ ಎನ್ನಲಾಗಿದೆ.

For All Latest Updates

ABOUT THE AUTHOR

...view details