ಕರ್ನಾಟಕ

karnataka

ಕೆರೆಯಲ್ಲಿ ಮಹಿಳೆಯ ಶವ ಪತ್ತೆ: ಹಳ್ಳದ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಶಂಕೆ

By

Published : Oct 14, 2020, 5:03 PM IST

ಕಳೆದ ನಾಲ್ಕೈದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳದ ನೀರಿನ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

body found
body found

ಬಸವಕಲ್ಯಾಣ (ಬೀದರ್):ಭಾಲ್ಕಿ ತಾಲೂಕಿನ ಜೀರ್ಗ್ಯಾಳನಲ್ಲಿ ಬಳಿಕೆರೆ ನೀರಿನಲ್ಲಿ ಮಹಿಳೆಯೊಬ್ಬಳ ಶವ ಪತ್ತೆಯಾಗಿದ್ದು, ಮಹಿಳೆ ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಹುಲಸೂರ ತಾಲೂಕಿನ ಬೇಲೂರ ಗ್ರಾಮದ ಭಾರತಬಾಯಿ ಹಣಮಂತ ಹಾರಗೆ (55) ಮೃತ ಮಹಿಳೆ. ಕಳೆದ ನಾಲ್ಕೈದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಇವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕೆರೆ ನೀರಿನಲ್ಲಿ ಮಹಿಳೆಯ ಶವ ಪತ್ತೆ

ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳದ ನೀರಿನ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಕೆರೆಯಲ್ಲಿ ಮೀನು ಹಿಡಿಯಲೆಂದು ನೀರಿಗಿಳಿದ ಮೀನುಗಾರರು ಮಹಿಳೆಯ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಭಾಲ್ಕಿ ತಾಲೂಕಿನ ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಸಾವಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details