ಬಸವಕಲ್ಯಾಣ(ಬೀದರ್) :ಪರಿಸರ ಸಂರಕ್ಷಣೆಯಿಂದ ಮಾತ್ರ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ. ತಾಲೂಕಿನಲ್ಲಿ ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ. ಹಸಿರಿನಿಂದ ಕೂಡಿದ ಸುಂದರ ಪರಿಸರ ಸಂರಕ್ಷಣೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಅರಣ್ಯ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಬಿ ನಾರಾಯಣರಾವ್ ಹೇಳಿದರು.
ಕವಡಿಯಾಳ ಕ್ರಾಸ್ ಸಮೀಪದ ಸಾಲುಮರದ ತಿಮ್ಮಕ್ಕ ಮಕ್ಕಳ ಉದ್ಯಾನವನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯಾನವನದಲ್ಲಿ ಕುಡಿಯುವ ನೀರು, ವಾಕಿಂಗ್ ಟ್ರ್ಯಾಕ್, ಕಾರಂಜಿ ಸೇರಿ ಇತರ ಸೌಲಭ್ಯಗಳಿಗೆ ಕೆಕೆಆರ್ಡಿಬಿಯಿಂದ 50 ಲಕ್ಷ ರೂ. ಅನುದಾನ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.