ಕರ್ನಾಟಕ

karnataka

ಕಾಂಗ್ರೆಸ್, ಬಿಜೆಪಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ: ಹೆಚ್‌ಡಿಕೆ

By

Published : Apr 23, 2022, 5:06 PM IST

ಅಧಿಕಾರದಲ್ಲಿರುವ ಸರ್ಕಾರಗಳಿಗೆ ಚುನಾವಣೆ ಹೇಗೆ ಗೆಲ್ಲಬೇಕು ಎಂಬುದೇ ಯೋಚನೆಯಾಗಿದೆ. ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಅವರಿಗಿಲ್ಲ. ಜೆಡಿಎಸ್​ಗೆ ಅಧಿಕಾರ ಸಿಕ್ಕರೆ ಲೋಕಾಯುಕ್ತವನ್ನು ಬಲಪಡಿಸಲಾಗುವುದು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

kumaraswamy
ಕುಮಾರಸ್ವಾಮಿ

ಬೀದರ್​:ಭ್ರಷಾಚಾರಕ್ಕೆ ಕಡಿವಾಣ ಬೀಳದಿದ್ದರೆ ಶ್ರೀಲಂಕಾದ ಪರಿಸ್ಥಿತಿ ಭಾರತಕ್ಕೆ ಬಂದರೂ ಅಚ್ಚರಿ ಇಲ್ಲ. ಸರ್ಕಾರದಲ್ಲಿ ಯಾರೂ ಹೇಳೋರು ಕೇಳೋರು ಇಲ್ಲ, ಹಿಡಿತ ಇಲ್ಲ. ಹೈಕಮಾಂಡ್​​ಗೆ ಗೊತ್ತಿರೋದು ಬೆಂಕಿ ಹಚ್ಚುವ ಕೆಲಸ. ಚುನಾವಣೆಯಲ್ಲಿ ಹೇಗೆ ಗೆಲ್ಲಬೇಕು ಎನ್ನುವುದು ಮಾತ್ರ ಗೊತ್ತು. ಜನರ ಸಮಸ್ಯೆ ಅವರಿಗೆ ಬೇಕಾಗಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಶನಿವಾರ ಜಿಲ್ಲೆಯ ಖಾಶೆಂಪುರ್ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವೇ ಕೆಲವು ವ್ಯಕ್ತಿಗಳು ಒಂದು ಗಂಟೆಯಲ್ಲಿ 52 ಕೋಟಿ ಸಂಪಾದನೆ ಮಾಡುತ್ತಾರೆ ಅಂದರೆ ಬಡವರ ಪರಿಸ್ಥಿತಿ ಏನಾಗಬೇಕು. ಇಲ್ಲಿ ಯಾರಿಗೂ ದೇಶ ಉಳೀಬೇಕು, ದೇಶದ ಪ್ರಜೆಗಳು ಚೆನ್ನಾಗಿ ಬದುಕಬೇಕು ಎಂಬ ಆಸೆಯಿಲ್ಲ. ಕಾಂಗ್ರೆಸ್‌ನವರು ಇಂದು ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತಾರೆ. ಲೋಕಾಯುಕ್ತ ಕಂಪ್ಲೀಟ್ ಆಗಿ ಕ್ಲೋಸ್ ಮಾಡಿದ್ದ ಅವರೇ ಎಂದು ದೂರಿದರು.

ಅಧಿಕಾರ ಸಿಕ್ಕರೆ ಲೋಕಾಯುಕ್ತಕ್ಕೆ ಬಲ:ಭ್ರಷ್ಟಾಚಾರದ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳು ಹೋರಾಟ ಮಾಡುತ್ತಿರುವುದು ಕೇವಲ ನಾಟಕ. ಕಾಂಗ್ರೆಸ್ ಹಾಗೂ ಬಿಜೆಪಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಮುಂದೆ ಸಂಪೂರ್ಣ ಬಹುಮತದೊಂದಿದೆ ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುತ್ತೇನೆ ಎಂದು ಹೇಳಿದರು.

ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರವಿದೆ:ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಇಲಾಖೆಗಳಲ್ಲೂ ಅಕ್ರಮ ನಡೆಯುತ್ತಿದೆ. ನನಗಷ್ಟೇ ಅಲ್ಲದೇ ಆಡಳಿತ ನಡೆಸುತ್ತಿರುವ ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ದೊಡ್ಡ ಕರ್ಮಕಾಂಡಗಳು ಇವೆ. ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ಅಪಾರ್ಟ್ಮೆಂಟ್ ಮಾಡಿಕೊಳ್ಳಲು 25 ಲಕ್ಷದಿಂದ 50 ಲಕ್ಷ ನಿಗದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ ಎಂದರು.

ಒಂದು ಯೋಜನೆಯಿಂದ 65% ಹಣ ಸೋರಿಕೆಯಾಗುತ್ತಿದೆ. 40% ಸರ್ಕಾರ ಕಮಿಷನ್ ತೆಗೆದುಕೊಂಡರೆ, 25% ಗುತ್ತಿಗೆದಾರ ತೆಗೆದುಕೊಳ್ಳುತ್ತಾನೆ. ಕಾಂಟ್ರ್ಯಾಕ್ಟರ್ ತನ್ನ ಲಾಭ ನೋಡಿಕೊಳ್ಳಬೇಕಲ್ಲ. ಎಲ್ಲಾ ಕಮಿಷನ್ ತೆಗೆದರೆ 65% ಹಣ ಸೋರಿಕೆಯಾಗುತ್ತಿದೆ. ಕೇವಲ 35% ಹಣದಲ್ಲಿ ಮಾತ್ರ ಕೆಲಸ ಆಗುತ್ತಿದೆ ಎಂದು ಎಚ್‌ಡಿಕೆ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ಭಟ್ಕಳ: ಒಂದೂವರೆ ಕೋಟಿ ಹಣ ದುರುಪಯೋಗ; SBI ಬ್ಯಾಂಕ್‌ ಮ್ಯಾನೇಜರ್ ಪರಾರಿ

For All Latest Updates

TAGGED:

ABOUT THE AUTHOR

...view details