ಕರ್ನಾಟಕ

karnataka

15 ಸಾವಿರ ಕೂಲಿ ಕಾರ್ಮಿಕರಿಗೆ ಶಾಸಕ ಬಿ.ನಾರಾಯಣರಾವ್​​ ಅಗತ್ಯ ವಸ್ತುಗಳ ಕಿಟ್​ ವಿತರಣೆ..

By

Published : Apr 2, 2020, 9:51 AM IST

ನಗರ ಸೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರು 15 ಸಾವಿರ ಜನ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಉಪ್ಪು, ಖಾರ ಹಾಗೂ ಸಾಬೂನು ಒಳಗೊಂಡ ಕಿಟ್ ವಿತರಿಸಲಾಗ್ತಿದೆ.

MLA B. Narayanarao distributes essential kit for wage laborers
ಶಾಸಕ ಬಿ.ನಾರಾಯಣರಾವ್​​ ಅಗತ್ಯ ವಸ್ತುಗಳ ಕಿಟ್​ ವಿತರಣೆ

ಬಸವಕಲ್ಯಾಣ: ಮಾರಕ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್‌ಡೌನ್ ಆದೇಶ ಜಾರಿಯಲ್ಲಿದೆ. ಕೆಲಸ ಹಾಗೂ ಕೂಲಿ ಕೆಲಸವೂ ಇಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ಕಟುಂಬಗಳಿಗೆ ಆಧಾರವಾಗಲು ಶಾಸಕ ಬಿ. ನಾರಾಯಣರಾವ್​ ಸಹಾಯ ಹಸ್ತ ಚಾಚಿದ್ದಾರೆ.

ನಗರ ಸೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರು 15 ಸಾವಿರ ಜನ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಉಪ್ಪು, ಖಾರ ಹಾಗೂ ಸಾಬೂನು ಒಳಗೊಂಡ ಕಿಟ್ ವಿತರಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ. ನಗರದ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸಾವಿರಾರು ಜನರಿಗೆ ಅಗತ್ಯ ವಸ್ತುಗಳ ಕಿಟ್​ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಇನ್ನೂ ಎರಡು ದಿನ ನಗರದಲ್ಲಿ ವಿತರಿಸಿದ ನಂತರ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿಯೂ ಬಡ ಜನತೆಗೆ ಕಿಟ್ ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ABOUT THE AUTHOR

...view details