ಬೀದರ್: ಅಡುಗೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದ ಎಂಬ ಆರೋಪದ ಹಿನ್ನೆಲೆ ಕಮಲನಗರ ತಾಲೂಕಿನ ಖತಗಾಂವ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಶಿವಕುಮಾರ್ ಡೊಂಗರೆ ಅವರನ್ನು ಡಿಡಿಪಿಐ ಅಮಾನತುಗೊಳಿಸಿದ್ದಾರೆ.
ಲೈಂಗಿಕ ಕಿರುಕುಳಕ್ಕೆ ಪ್ರಯತ್ನಿಸಿದ್ದಲ್ಲದೇ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕನ ವಿರುದ್ಧ ಗ್ರಾಮಸ್ಥರು ಮತ್ತು ಅಡುಗೆ ಸಿಬ್ಬಂದಿ ನೀಡಿದ ದೂರಿನನ್ವಯ, ವಿಷಯ ಪರಿವೀಕ್ಷಕರು ಜಂಟಿ ವಿಚಾರಣಾ ತಂಡ ಶಾಲೆಗೆ ತೆರಳಿ ಪರಿಶೀಲಿಸಿತ್ತು. ಆರೋಪ ಸಾಬೀತಾಗಿರುವ ಕುರಿತು ವರದಿ ಸಲ್ಲಿಸಿದ್ದರಿಂದ 15 ದಿನದೊಳಗೆ ಶಿಕ್ಷಕನಿಗೆ ರಕ್ಷಣಾ ಹೇಳಿಕೆ ನೀಡುವಂತೆ ನೋಟಿಸ್ ನೀಡಲಾಗಿತ್ತು.