ಕರ್ನಾಟಕ

karnataka

By

Published : Apr 18, 2020, 8:55 AM IST

ETV Bharat / state

ಕೊರೊನಾ ಸರ್ವೆ ಕಾರ್ಯದಲ್ಲಿ ನಿರ್ಲಕ್ಷ್ಯ: ಇಬ್ಬರು ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿ ವಜಾ

ಕೊರೊನಾ ಸೋಂಕು ಪತ್ತೆ ಹಚ್ವುವ ಸರ್ವೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಿರಿಯ ಆರೋಗ್ಯ ಸಹಾಯಕಿ ಮತ್ತು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ವಜಾ ಮಾಡಲಾಗಿದೆ.

bidar
ಕೊರೊನಾ ಸೋಂಕು ಪತ್ತೆ ಹಚ್ವುವ ಸರ್ವೆ ಕಾರ್ಯದಲ್ಲಿ ನಿರ್ಲಕ್ಷ್ಯ

ಬೀದರ್: ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಗ್ಯ ಸಹಾಯಕಿ ಹಾಗೂ ಇಬ್ಬರು ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ವಜಾ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆದೇಶ ನೀಡಿದ್ದಾರೆ.

ಜಿಲ್ಲೆಯ 10 ಹಾಸಿಗೆ ಪ್ರಸೂತಿ ಗೃಹದ ಕಿರಿಯ ಆರೋಗ್ಯ ಸಹಾಯಕಿ, ಬಿದ್ರಿ ಕಾಲೋನಿ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ವಜಾ ಮಾಡಲಾಗಿದೆ.

ಇನ್ನು ಕೊರೊನಾ ವೈರಸ್ ಸೋಂಕು ಪತ್ತೆ ಹಚ್ವುವ ಸರ್ವೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿರುವುದು ಕಂಡು ಬಂದ ಹಿನ್ನಲೆಯಲ್ಲಿ ಗುತ್ತಿಗೆ ಒಪ್ಪಂದ ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details