ಕರ್ನಾಟಕ

karnataka

By

Published : May 27, 2019, 11:42 PM IST

ETV Bharat / state

ಕಾರಿಗೆ ಡಿಕ್ಕಿ ಹೊಡೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಹಿಂಬದಿಯಿಂದ ಬಂದ ಬೈಕ್​ ಸವಾರಿಬ್ಬರು ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಲ್ಲದೇ ಅದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಮನಬಂದಂತೆ ಥಳಿಸಿ ಪರಾರಿಯಾಗಿದ್ದಾರೆ.

ಚಾಲಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಂಗಳೂರು: ಹಿಂಬದಿಯಿಂದ ಬಂದ ಬೈಕ್​, ಕಾರಿಗೆ ಡಿಕ್ಕಿ ಹೊಡೆದಿದ್ದಲ್ಲದೆ ಅದನ್ನು ಪ್ರಶ್ನಿಸಿದ ಕಾರು ಚಾಲಕನ‌ ಮೇಲೆ ಇಬ್ಬರು ದುಷ್ಕರ್ಮಿಗಳು ಮನಬಂದಂತೆ ಥಳಿಸಿರುವ ಘಟನೆ ಮೈಕೊ‌ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂರ್ತಿ (27) ಹಲ್ಲೆಗೆ ಒಳಗಾದ ಚಾಲಕ. ಇದೇ ತಿಂಗಳ 18ರಂದು ಮೂರ್ತಿ ಬಿಟಿಎಂ ಲೇಔಟ್​ನ ಕೋಡಿಚಿಕ್ಕನಹಳ್ಳಿ ಬಳಿ ಗ್ರಾಹಕರನ್ನು ಡ್ರಾಪ್ ಮಾಡಲು ಹೋಗಿದ್ದರು. ಮಾರ್ಗ ಮಧ್ಯೆ ಕಾರಿನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್​ನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕೆಳಗಿಳಿದು ಪ್ರಶ್ನಿಸಿದಕ್ಕೆ ಆಕ್ರೋಶಗೊಂಡು ಚಾಲಕನ ವಿರುದ್ಧ ನಾವು ಲೋಕಲ್, ನಮ್ಮನ್ನೇ ಪ್ರಶ್ನೆ ಮಾಡ್ತೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

ಈ ವೇಳೆ ಕಾರಿನ ಗ್ಲಾಸ್ ಪುಡಿ ಮಾಡಿ ಗ್ಯಾರೇಜ್ ವಸ್ತುಗಳಿಂದ ಹಲ್ಲೆ ನಡೆಸಿ, ಕಾರಿನ ಮೇಲೆ ಇಟ್ಟಿಗೆ ಹಾಕಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ಮೂರ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details