ಕರ್ನಾಟಕ

karnataka

ETV Bharat / state

ದೇವೇಗೌಡರು ಕರೆದಿದ್ದ ಸಭೆಯಲ್ಲಿ ಮಾತಿನ ಜಟಾಪಟಿ: ಅಲ್ತಾಫ್​​ ಖಾನ್​​​​​ ಹೇಳಿಕೆಗೆ ಆಕ್ರೋಶ - undefined

ದೇವೇಗೌಡರು ಕರೆದಿದ್ದ ಮುಸ್ಲಿಂ ಸಮುದಾಯದ ಸಭೆಯಲ್ಲಿ ಚಾಮರಾಜಪೇಟೆ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಲ್ತಾಫ್ ಖಾನ್ ಹೇಳಿಕೆಗೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಮಾತಿನ ಜಟಾಪಟಿ ನಡೆದಿದೆ.

ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮುದಾಯದ ಸಭೆ

By

Published : Jul 3, 2019, 4:42 PM IST

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮುಸ್ಲಿಂ ಸಮುದಾಯದ ಸಭೆಯಲ್ಲಿ ಮಾತಿನ ಜಟಾಪಟಿ ನಡೆದಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ದೇವೇಗೌಡರು ಕರೆದಿದ್ದ ಮುಸ್ಲಿಂ ಸಮುದಾಯದ ಸಭೆಯಲ್ಲಿ ಚಾಮರಾಜಪೇಟೆ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಲ್ತಾಫ್ ಖಾನ್ ಭಾಷಣ ಮಾಡುತ್ತಿದ್ದ ವೇಳೆ ವಾಗ್ವಾದ ಉಂಟಾಗಿ, ಕಾರ್ಯಕರ್ತರು ತಿರುಗಿಬಿದ್ದರು.

ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ

ನಡೆದದ್ದು ಏನು?

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ನಮ್ಮವರೇ ಕಾಂಗ್ರೆಸ್​​ಗೆ ಮತ ಹಾಕಿಲ್ಲ. ಹಾಗಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಸೋತರೆಂದು ಅಲ್ತಾಫ್ ಖಾನ್ ಹೇಳುತ್ತಿದ್ದಂತೆ ಆಕ್ರೋಶಗೊಂಡ ಚಾಮರಾಜಪೇಟೆ ಮುಸ್ಲಿಂ ಸಮುದಾಯದ ಕಾರ್ಯಕರ್ತರು, ಭಾಷಣ ನಿಲ್ಲಿಸುವಂತೆ ಜೋರು ಧ್ವನಿಯಲ್ಲಿ ಕೂಗಾಟ ನಡೆಸಿದರು. ಆಗ ಅಲ್ತಾಫ್​ಗೆ ಕುಳಿತುಕೊಳ್ಳಲು ವೇದಿಕೆಯಲ್ಲಿದ್ದ ಮುಖಂಡರಿಂದ ಸೂಚನೆ ಬಂತು.

ಎಲ್ಲವನ್ನೂ ಮೌನವಾಗಿ ಕುಳಿತು ದೇವೇಗೌಡರು ಗಮನಿಸುತ್ತಿದ್ದರು. ಕೂಗಾಟ ಹೆಚ್ಚಾಗುತ್ತಿದ್ದಂತೆಯೇ ತಕ್ಷಣವೇ ಮಾಧ್ಯಮದವರನ್ನು ಜೆಡಿಎಸ್ ಮುಖಂಡರು ಹೊರಗೆ ಕಳುಹಿಸಿದರು. ವೇದಿಕೆಯಲ್ಲಿ ಮಧು ಬಂಗಾರಪ್ಪ, ಮಾಜಿ ಸಚಿವ ನಬಿ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಎನ್.ಹೆಚ್.ಕೋನರೆಡ್ಡಿ, ಜಫ್ರುಲ್ಲಾ ಖಾನ್ ಮತ್ತಿತರು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details