ಬೆಂಗಳೂರು : 'ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ ಎಂಬ ಕುವೆಂಪು ಅವರ ಸಾಲುಗಳ ಜೊತೆಗೆ, ಗ್ರಾಮ ವಾಸ್ತವ್ಯ ಕುರಿತು ವಿರೋಧ ಪಕ್ಷದ ನಾಯಕರ ಹುರುಳಿಲ್ಲದ ಟೀಕೆಗೆ ಇದೇ ನನ್ನ ಉತ್ತರ' ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರತಿಪಕ್ಷದ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಪ್ರತಿಪಕ್ಷದ ನಾಯಕರಿಗೆ ಟ್ವೀಟ್ನಲ್ಲಿ ಟಾಂಗ್ ಕೊಟ್ಟ ಸಿಎಂ
ಗ್ರಾಮ ವಾಸ್ತವ್ಯ ಕುರಿತು ವಿರೋಧ ಪಕ್ಷದ ನಾಯಕರ ಟೀಕೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿದ್ದಾರೆ.
ಸಿಎಂ ಟ್ವೀಟ್
ಸರ್ಕಾರ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ನಾನು ನಿನ್ನೆ ಗ್ರಾಮ ವಾಸ್ತವ್ಯ ಮಾಡಿರುವುದು ಸಹ ಬರಪೀಡಿತ ಯಾದಗಿರಿ ಜಿಲ್ಲೆಯಲ್ಲೇ. ಆ ಮೂಲಕ ಜನರ ಸಂಕಷ್ಟಗಳನ್ನು ಸಹ ಅರಿತಿದ್ದೇನೆ. ಅದಕ್ಕೆ ಪರಿಹಾರವನ್ನೂ ಒದಗಿಸಲಾಗುತ್ತಿದೆ. ಪ್ರತಿಪಕ್ಷದ ನಾಯಕರು ಒಂದೆಡೆ ಅಧಿಕಾರಿಗಳ ಬೆನ್ನುತಟ್ಟಿ, ಮಾಧ್ಯಮಗಳ ಮುಂದೆ ಭಿನ್ನರಾಗ ಹಾಡುವುದು ಅವರ ದ್ವಂದ್ವ ನೀತಿಯನ್ನು ಬಿಂಬಿಸುತ್ತದೆ ಎಂದು ಟ್ವೀಟ್ನಲ್ಲಿ ವ್ಯಂಗ್ಯವಾಡಿದ್ದಾರೆ.