ಬೆಂಗಳೂರು:ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ನೀಡಿರುವ ಮಧ್ಯಂತರ ಚುನಾವಣೆ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಜೊತೆ ವೇಣುಗೋಪಾಲ್ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಗೌಡರ ಈ ಹೇಳಿಕೆ ರಾಜಕೀಯವಾಗಿಹೊಸತಿರುವು ಪಡೆಯುತ್ತಿದ್ದಂತೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ದೂರವಾಣಿ ಮೂಲಕ ದೇವೇಗೌಡರ ಜತೆ ಮಾತುಕತೆ ನಡೆಸಿದ್ದಾರೆ. ಕರೆ ಮಾಡಿ ಇದೇನು ಸಾರ್ ನೀವೇ ಈ ರೀತಿ ಹೇಳಿಕೆ ಕೊಟ್ಟಿದ್ದೀರಲ್ಲ?. ನಿಮ್ಮ ಹೇಳಿಕೆಯೇ ಹಲವು ರಾಜಕೀಯ ತಿರುವು ಪಡೆಯುತ್ತಿದೆ. ಏನಕ್ಕೆ ಈ ರೀತಿ ಮಾತನಾಡಿದ್ದೀರಾ?. ಏನಾದ್ರು ಸಮಸ್ಯೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗ್ತಿದೆ.