ಬೆಂಗಳೂರು: ದೇವನಹಳ್ಳಿ ತಾಲೂಕಿನ ಗಾಲ್ಫ್ ಶೈರ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರಿಗೆ ಭರ್ಜರಿ ಬಾಡೂಟವನ್ನು ಏರ್ಪಡಿಸಲಾಗಿದೆ.
ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ... ಯಾರೆಲ್ಲಾ ಭಾಗಿ?
ಕೋಡುಗುರ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಹಿನ್ನೆಲೆ ಗಾಲ್ಫ್ ಶೈರ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ ಏರ್ಪಡಿಸಲಾಗಿದೆ.
ಜೆಡಿಎಸ್ ಶಾಸಕರುಗಳಿಗೆ ಭರ್ಜರಿ ಬಾಡೂಟ ಏರ್ಪಡು
ಕೋಡುಗುರ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಹಿನ್ನೆಲೆ ಎಪಿಎಂಸಿ ಅಧ್ಯಕ್ಷ ಕೆ.ವಿ ಮಂಜುನಾಥ್ ಎಂಬುವರ ಮನೆಯಲ್ಲಿ ಬಾಡೂಟವನ್ನು ಏರ್ಪಡಿಸಲಾಗಿದೆ. ನೆಲಮಂಗಲ ಶಾಸಕ ಡಾ. ಶ್ರೀನಿವಾಸ್, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಶಾಸಕ ಶ್ರೀಮಂತ್ ಪಾಟೀಲ್, ಬಂಡೆಪ್ಪ ಕಾಶೆಂಪೂರ್ ಈ ಬಾಡೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.