ಕರ್ನಾಟಕ

karnataka

By

Published : Apr 28, 2021, 6:09 PM IST

ETV Bharat / state

ಚಾಮರಾಜನಗರದಲ್ಲಿ ಕೊರೊನಾಂತಕ: 415 ಹೊಸ ಕೇಸ್, ಮೂವರು ಸಾವು

ಚಾಮರಾಜನಗರ ಜಿಲ್ಲೆಯಲ್ಲೂ ಕೊರೊನಾ ಆರ್ಭಟ ಮುಂದುವರಿಸಿದೆ. ಇಂದು 415 ಹೊಸ ಕೋವಿಡ್​ ಕೇಸ್​ಗಳು ಪತ್ತೆಯಾಗಿದ್ದರೆ, ಮೂವರು ಸೋಂಕಿಗೆ ಬಲಿಯಾಗಿದ್ದಾರೆ.

kovid
kovid

ಚಾಮರಾಜನಗರ: ಕೊರೊನಾ ಎರಡನೇ ಅಲೆಯ ಅಬ್ಬರ ಜಿಲ್ಲೆಯಲ್ಲೂ ಹೆಚ್ಚಾಗುತ್ತಿದ್ದು, ಇಂದು ಬರೋಬ್ಬರಿ 415 ಮಂದಿಗೆ ಸೋಂಕು ದೃಢಪಟ್ಟಿದ್ದರೆ, ಮರು ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ‌ ಸಂಖ್ಯೆ 1,975ಕ್ಕೆ ಏರಿಕೆಯಾಗಿದೆ.

ಇಂದು 207 ಮಂದಿ ಗುಣಮುಖರಾಗಿದ್ದಾರೆ. 1351 ಮಂದಿ ಹೋಂ ಐಸೋಲೇಷನ್​ನಲ್ಲಿದ್ದಾರೆ. 5,395 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

ಮೂವರ ಸಾವು:

ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು, ಇಂದು ಮೂವರು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗ್ರಾಮದ 36 ವರ್ಷದ ಮಹಿಳೆ, ಕೊಳ್ಳೇಗಾಲದ 59 ವರ್ಷದ ವ್ಯಕ್ತಿ ಹಾಗೂ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರದ 60 ವರ್ಷದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಕೊರೊನಾ ಸೋಂಕಿನಿಂದ ಮೃತರ ಸಂಖ್ಯೆ 131ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details