ಚಾಮರಾಜನಗರ:ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ ಬರೋಬ್ಬರಿ 60 ಲಕ್ಷ ರೂ. ಹಣ ದೇಣಿಗೆ ನೀಡಲಾಗಿದೆ.
ಸಿಎಂ ಯಡಿಯೂರಪ್ಪಗೆ ಇಂದು ಬೆಂಗಳೂರಿನಲ್ಲಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವಸ್ವಾಮಿ ಚೆಕ್ ಹಸ್ತಾಂತರಿಸಿದ್ದಾರೆ. ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ 50 ಲಕ್ಷ ರೂ. ಹಾಗೂ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿಯ 3 ದಿನದ ವೇತನ 10 ಲಕ್ಷ ರೂ. ಸೇರಿ ಒಟ್ಟು 60 ಲಕ್ಷ ರೂ. ಹಣವನ್ನು ಸಿಎಂ ನಿಧಿಗೆ ನೀಡಲಾಗಿದೆ.