ಕರ್ನಾಟಕ

karnataka

ETV Bharat / state

ಹಿಟ್ ಅಂಡ್ ರನ್: ಸ್ಥಳದಲ್ಲೇ ಪ್ರಾಣಬಿಟ್ಟ ಪತಿ, ಆಸ್ಪತ್ರೆಯಲ್ಲಿ ಪತ್ನಿ...

ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಬಳಿ ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವಿಗೀಡಾದ್ದಾರೆ.

By

Published : Apr 9, 2019, 5:26 AM IST

ಅಪಘಾತದಲ್ಲಿ ವ್ಯಕ್ತಿ ಸಾವು

ಚಾಮರಾಜನಗರ:ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಬಳಿ ನಡೆದಿದೆ.

ಹೊರೆಯಾಳ ಗ್ರಾಮದ ಹೊಣಕಾರಯ್ಯ ಮೃತಪಟ್ಟವರು. ಬೈಕಿನಲ್ಲಿ ಪತ್ನಿ ಮಂಜುಳಾರೊಂದಿಗೆ ನಂಜನಗೂಡಿಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಹೊಣಕಾರಯ್ಯ ಸ್ಥಳದಲ್ಲೆ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಮಂಜುಳಾರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪರಿಚಿತ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಆದರೆ ಅಪಘಾತ ಹೇಗೆ ನಡೆಯಿತು ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details