ಚಾಮರಾಜನಗರ: ಹುಲಿ ದಾಳಿ ಪ್ರಕರಣ ಕಳೆದ ಎರಡು ವರ್ಷದ ಬಳಿಕ ಮತ್ತೆ ಜಿಲ್ಲೆಯಲ್ಲಿ ಮರುಕಳಿಸಿದೆ. ಗುಂಡ್ಲುಪೇಟೆ ತಾಲೂಕಿನ ಲಕ್ಕಿಪುರ ಸಮೀಪ ರೈತರಿಬ್ಬರ ಮೇಲೆ ಹುಲಿಯೊಂದು ದಾಳಿ ಮಾಡಿದೆ. ಗೋಪಾಲಪುರ ಗ್ರಾಮದ ಗವಿಯಪ್ಪ(45), ರಾಜಶೇಖರ್ ಎಂಬ ರೈತರ ಮೇಲೆ ಹುಲಿ ದಾಳಿ ನಡೆಸಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ.
ಗವಿಯಪ್ಪ ಎಂದಿನಂತೆ ಜಮೀನಿಗೆ ತೆರಳಿ ಕೆಲಸ ಮಾಡುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ. ಈ ವೇಳೆ ರೈತ ಕೂಗಿಕೊಂಡ ಹಿನ್ನೆಲೆ ಸುತ್ತಮುತ್ತಲ ಜಮೀನಿನ ರೈತರು ಧಾವಿಸಿದಾಗ ಹುಲಿ ಓಡಿಹೋಗಿ ಪಕ್ಕದ ಜಮೀನಿನ ಪೊದೆಯಲ್ಲಿ ಅವಿತುಕೊಂಡಿದೆ. ಈ ವೇಳೆ ಬಾಳೆ ತೋಟದಲ್ಲಿ ಅಡಗಿದ್ದ ಹುಲಿಯನ್ನು ನೋಡಲು ಹೋಗಿದ್ದ ರಾಜಶೇಖರ್ ಎಂಬವರ ಮೇಲೂ ಹುಲಿ ದಾಳಿ ನಡೆಸಿದೆ.