ಕರ್ನಾಟಕ

karnataka

ಸಾರಿಗೆ ಸಂಸ್ಥೆ ಬಸ್​ಗೆ ಬೈಕ್ ಡಿಕ್ಕಿ: ಬ್ಯಾಂಕ್ ನೌಕರ ಸ್ಥಳದಲ್ಲೇ ಸಾವು

By

Published : Mar 22, 2021, 2:19 PM IST

ಸಾರಿಗೆ ಸಂಸ್ಥೆಯ ಬಸ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್​ ನೌಕರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.

Bank employee died, Bank employee died in road accident, Bank employee died in road accident at Chamarajanagar, Chamarajanagar crime news, ಬ್ಯಾಂಕ್​ ನೌಕರ ಸಾವು, ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರದಲ್ಲಿ ರಸ್ತೆ ಅಪಘಾತದಲ್ಲಿ ಬ್ಯಾಂಕ್​ ನೌಕರ ಸಾವು, ಚಾಮರಾಜನಗರ ಅಪರಾಧ ಸುದ್ದಿ,
ಸಾರಿಗೆ ಸಂಸ್ಥೆ ಬಸ್​ಗೆ ಬೈಕ್ ಡಿಕ್ಕಿ

ಚಾಮರಾಜನಗರ: ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಚೆನ್ನಲಿಂಗನಹಳ್ಳಿ ಗ್ರಾಮದ ಸಮೀಪ ಸಂಭವಿಸಿದೆ.

ಸಾರಿಗೆ ಸಂಸ್ಥೆ ಬಸ್​ಗೆ ಬೈಕ್ ಡಿಕ್ಕಿ

ಹನೂರು ತಾಲೂಕಿನ ಅಣಗಳ್ಳಿ ದೊಡ್ಡಿ ಗ್ರಾಮದ ಪ್ರಕಾಶ್ (26) ಮೃತಪಟ್ಟ ಯುವಕ. ಖಾಸಗಿ ಬ್ಯಾಂಕ್​ನ ಕೇಂದ್ರೀಯ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಸೋಮವಾರ ಮಂಗಲ, ಚೆನ್ನಲಿಂಗನಹಳ್ಳಿ ಗ್ರಾಮದಲ್ಲಿನ ಕೇಂದ್ರೀಯ ಸಂಘದ ಸದಸ್ಯರಿಂದ ಹಣ ಪಡೆದಿದ್ದಾನೆ. ಅಲ್ಲಿಂದ ಪ್ರಕಾಶ್​ ಲೋಕನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಒಡೆಯರಪಾಳ್ಯ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ನಿಯಂತ್ರಣ ತಪ್ಪಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಕಾಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಈ ಘಟನೆ ಕುರಿತು ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details