ಕರ್ನಾಟಕ

karnataka

By

Published : Oct 20, 2019, 8:19 PM IST

ETV Bharat / state

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಕೇರಳದ ಸವಾರ ಸಾವು

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಸವಾಪುರದ ಬಳಿ ಕಾರು ಮತ್ತು ಬೈಕ್​ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಾರು-ಬೈಕ್ ಮುಖಾಮುಖಿ ಡಿಕ್ಕಿ

ಚಾಮರಾಜನಗರ:ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರದ ಬಳಿ ನಡೆದಿದೆ.

ಕೇರಳದ ಸುಲ್ತಾನ್ ಬತ್ತೇರಿಯ ತುಷಾರ್ (21) ಮೃತಪಟ್ಟವರು. ಇನ್ನು ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಕಾರಿನ ಹಿಂಬದಿ ಬರುತ್ತಿದ್ದ ಗುಂಡ್ಲುಪೇಟೆಯ ಮೊಫೆಡ್ ಸವಾರನೂ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಕಾರು-ಬೈಕ್ ಮುಖಾಮುಖಿ ಡಿಕ್ಕಿ

ಮೃತಪಟ್ಟ ತುಷಾರ್​ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details