ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ವಾರಾಂತ್ಯದ ನಿರ್ಬಂಧ: ಲಸಿಕೆ ಪಡೆದಿದ್ದರೂ ರಾಜ್ಯ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ - ವಾರಾಂತ್ಯ ಕರ್ಫ್ಯೂ :

ಕೇರಳದಲ್ಲಿ ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಲ್ಲಿಂದ ಜಿಲ್ಲಾ ಪ್ರವೇಶ ಮಾಡಲು ಕೋವಿಡ್​ ನೆಗೆಟಿವ್​ ವರದಿ ಕಡ್ಡಾಯ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

DC Visited checkposts
ಚೆಕ್​ಪೋಸ್ಟ್​ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

By

Published : Aug 2, 2021, 5:33 PM IST

ಚಾಮರಾಜನಗರ:ಕೇರಳದಿಂದ ರಾಜ್ಯ ಪ್ರವೇಶಕ್ಕೆ RT-PCR ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್​. ರವಿ ಆದೇಶ ಹೊರಡಿಸಿದ್ದಾರೆ.

ಚೆಕ್​ಪೋಸ್ಟ್​ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಈ ಹಿಂದೆ ಒಂದು ಡೋಸ್ ಲಸಿಕೆ ಪಡೆದಿದ್ದರೂ ರಾಜ್ಯ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು.‌ ಆದರೆ, ಕೇರಳದಲ್ಲಿ ಕೊರೊನಾ ಪ್ರಕರಗಳು ಹೆಚ್ಚಳವಾಗುತ್ತಿರುವುದರಿಂದ ಎರಡು ಡೋಸ್ ಲಸಿಕೆ ಪಡೆದಿದ್ದರೂ 72 ಗಂಟೆ ಒಳಗಿನ‌ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮೂಲೆಹೊಳೆ, ಕೆಕ್ಕನಹಳ್ಳ ಚೆಕ್ ಪೋಸ್ಟ್​ಗಳಿಗೆ ಭೇಟಿ ನೀಡಿ ಸಿಬ್ಬಂದಿಗೆ ಸೂಚಿಸಿದ್ದಾರೆ.

ಸರಕು ಸಾಗಣೆ ವಾಹನ ಚಾಲಕರು ಪ್ರತಿ 15 ದಿನಕ್ಕೊಮ್ಕೆ RT-PCR ಟೆಸ್ಟ್ ಮಾಡಿಸಿಕೊಳ್ಳಬೇಕಿದೆ.‌ ಇದರೊಟ್ಟಿಗೆ ಬಂಡೀಪುರ ಸಫಾರಿಗೆ ತೆರಳುವವರಿಗೂ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

ಓದಿ: ಮೂರನೇ ಅಲೆ ಭೀತಿ: ವಾರಾಂತ್ಯದಲ್ಲಿ ಚಾಮರಾಜನಗರದ ಎಲ್ಲಾ ದೇಗುಲ, ಪ್ರವಾಸಿ ತಾಣ ಬಂದ್

ವಾರಾಂತ್ಯ ಕರ್ಫ್ಯೂ :

ಮಲೆಮಹದೇಶ್ವರ ದೇವಾಲಯ ಸೇರಿದಂತೆ ಜಿಲ್ಲೆಯ ಎಲ್ಲ ದೇವಾಲಯಗಳು, ಬಂಡೀಪುರ ಸಫಾರಿ, ಭರಚುಕ್ಕಿ, ಹೊಗೆನಕಲ್ ಜಲಪಾತ, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರು, ಭಕ್ತರು ಪ್ರವೇಶವನ್ನು ಶನಿವಾರ, ಭಾನುವಾರ ನಿರ್ಬಂಧಗೊಳಿಸಿ ಡಿಸಿ ಆದೇಶಿಸಿದ್ದಾರೆ. ರೆಸಾರ್ಟ್, ಹೋಂ ಸ್ಟೇಗಳಲ್ಲಿ ಪ್ರವಾಸಿಗರು ತಂಗಲು 72 ಗಂಟೆ ಒಳಗಿನ‌ RT-PCR ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

ABOUT THE AUTHOR

...view details