ಚಾಮರಾಜನಗರ: ಸಿರಂಜ್ಗಳು, ಸ್ಯಾನಿಟೈಸರ್ ಬಾಟಲಿಗಳು, ಬಾಡಿ ಸ್ಪ್ರೇ ಬಾಟಲಿಗಳಲ್ಲಿ ಚಾಕೋಲೆಟ್ ಮಾರಾಟಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲ ತಹಶೀಲ್ದಾರ್ ಹಾಗೂ ಡಿಹೆಚ್ಒ ಡಾ. ಗೋಪಾಲ್ ನೇತೃತ್ವದಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಮಾರಾಟ ಮಾಡುತ್ತಿದ್ದ 8ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿ ಚಾಕೋಲೆಟ್ ವಶಪಡಿಸಿಕೊಂಡು ಪರೀಕ್ಷೆಗಾಗಿ ಗುಂಡ್ಲುಪೇಟೆಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಜೊತೆಗೆ ಪರೀಕ್ಷೆಯ ವರದಿ ಬರುವ ತನಕ ಚಾಕೋಲೆಟ್ಗಳನ್ನು ಮಾರಾಟ ಮಾಡಬಾರದು ಎಂದು ತಾಕೀತು ಮಾಡಲಾಗಿದೆ.