ಚಾಮರಾಜನಗರ:ತಾಲೂಕಿನ ಮಾದಪುರದಲ್ಲಿರುವ ಕೇಂದ್ರಿಯ ವಿದ್ಯಾಲಯದ ಇಬ್ಬರು ಬೋಧಕೇತರ ಸಿಬ್ಬಂದಿಗೆ ಸೋಂಕು ತಗುಲಿದ್ದು, ಸದ್ಯ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇಬ್ಬರು ಶಿಕ್ಷಕೇತರ ಸಿಬ್ಬಂದಿ ಹಾಗೂ ಅವರಿಬ್ಬರ ಸಂಪರ್ಕಿತರಿಗೆ ಇಂದು ಸೋಂಕು ದೃಢಪಟ್ಟಿದೆ. ವಿದ್ಯಾಲಯದಲ್ಲಿ 2021-22ನೇ ಸಾಲಿನ ಶೈಕ್ಷಣಿಕ ಶಾಲಾ ದಾಖಲಾತಿ ಆರಂಭವಾಗಿದ್ದು, ಮಕ್ಕಳನ್ನು ದಾಖಲಾತಿ ಮಾಡಲು ಬಂದ ಪೋಷಕರಲ್ಲೂ ಭೀತಿ ಆವರಿಸಿದೆ.