ಚಾಮರಾಜನಗರ: ಅರೆಬೆತ್ತಲೆಯಾಗಿ ವ್ಯಕ್ತಿಯೊಬ್ಬನ ಶವ ಚಾಮರಾಜನಗರ ತಾಲೂಕಿನ ಕೋಡಿಮೋಳೆ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಮೃತನಿಗೆ ಅಂದಾಜು 35-39 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಚಾಕು ಇಲ್ಲವೇ ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಚಾಮರಾಜನಗರ: ಕೆರೆ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಅನಾಥ ಶವ ಪತ್ತೆ, ಕೊಲೆ ಶಂಕೆ - dead body found near the lake murder is suspected in Chamarajanagar
ಚಾಮರಾಜನಗರ ತಾಲೂಕಿನ ಕೋಡಿ ಮೋಳೆ ಗ್ರಾಮದ ಕೆರೆಯಲ್ಲಿ ಅಪರಿಚಿತ ಶವ ಒಂದು ಪತ್ತೆಯಾಗಿದೆ. ಪ್ರಕರಣವನ್ನು ಕೊಲೆ ಎಂದು ಶಂಕಿಸಲಾಗಿದೆ.
![ಚಾಮರಾಜನಗರ: ಕೆರೆ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಅನಾಥ ಶವ ಪತ್ತೆ, ಕೊಲೆ ಶಂಕೆ murder is suspected](https://etvbharatimages.akamaized.net/etvbharat/prod-images/768-512-15812626-thumbnail-3x2-bng.jpeg)
ಅನಾಥ ಶವ ಪತ್ತೆ
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಕೊಲೆ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ :ರಾಮಸೇನಾದ ಜಿಲ್ಲಾಧ್ಯಕ್ಷನಿಂದ ಪ್ರೇಯಸಿಯ ಕೊಲೆ ಯತ್ನ