ಕರ್ನಾಟಕ

karnataka

By

Published : Sep 9, 2019, 7:12 PM IST

Updated : Sep 9, 2019, 8:53 PM IST

ETV Bharat / state

ಇನ್ನಾರು ತಿಂಗಳಲ್ಲಿ ಚುನಾವಣೆ: ಮಾಜಿ ಸಂಸದ ಧ್ರುವ ಭವಿಷ್ಯ

ಕೆಲವರನ್ನು ತೃಪ್ತಿಪಡಿಸಲು 3 ಡಿಸಿಎಂ ಹುದ್ದೆ ಸೃಷ್ಟಿಸಲಾಗಿದೆ. ಇನ್ನು ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಪ್ರಸ್ತಾಪಿಸಿರುವುದು ಸರಿಯಲ್ಲ, ಅವರ ಪಕ್ಷದ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರೇ ಇದನ್ನು ವಿರೋಧಿಸಿದ್ದಾರೆ ಎಂದು ಮಾಜಿ ಸಂಸದ ಆರ್​ ಧ್ರುವನಾರಾಯಣ್​ ಬಿಜೆಪಿ ವಿರುದ್ಧ ಹರಿಹಾಯ್ದರು.

ಆರ್.ಧ್ರುವನಾರಾಯಣ

ಚಾಮರಾಜನಗರ: ಆರು ತಿಂಗಳಲ್ಲಿ ಸರ್ಕಾರ ಪತನಗೊಂಡು ಚುನಾವಣೆ ಬರಲಿದೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ ಭವಿಷ್ಯ ನುಡಿದಿದ್ದಾರೆ.

ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವರನ್ನು ತೃಪ್ತಿಪಡಿಸಲು 3 ಡಿಸಿಎಂ ಹುದ್ದೆ ಸೃಷ್ಟಿಸಲಾಗಿದೆ. ಇನ್ನು ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಪ್ರಸ್ತಾಪಿಸಿರುವುದು ಸರಿಯಲ್ಲ, ಅವರ ಪಕ್ಷದ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರೇ ಇದನ್ನು ವಿರೋಧಿಸಿದ್ದಾರೆ ಎಂದರು.

ಮಾಜಿ ಸಂಸದ ಆರ್.ಧ್ರುವನಾರಾಯಣ

ಕಾಂಗ್ರೆಸ್ ಸರ್ಕಾರದಲ್ಲಿ ಹಿರಿತನಕ್ಕೆ ಬೆಲೆ ಇತ್ತು‌. ಆದರೆ, ಬಿಜೆಪಿ ಸರ್ಕಾರದಲ್ಲಿ ಹಣಕ್ಕಷ್ಟೇ ಬೆಲೆ.‌ ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ರಚನೆಯಾಗಿಲ್ಲ, ಜನ ಬೆಂಬಲವಿಲ್ಲ ಎಂದು ಕಿಡಿಕಾರಿದರು.

Last Updated : Sep 9, 2019, 8:53 PM IST

ABOUT THE AUTHOR

...view details