ಚಾಮರಾಜನಗರ: ಒಂದು ಆಸ್ಪತ್ರೆಯಲ್ಲಿ ಯುವಕನಿಗೆ ಕೋವಿಡ್ ಪಾಸಿಟಿವ್ ಬಂದಿದ್ದರೆ, ಮತ್ತೊಂದರಲ್ಲಿ ನೆಗೆಟಿವ್ ಬಂದಿದೆ. ಈ ಗೊಂದಲದ ಫಲಿತಾಂಶದಿಂದಾಗಿ ಇಂಟರ್ವ್ಯೂ ತಪ್ಪಿಸಿಕೊಂಡು ಯುವಕ ನೆಚ್ಚಿನ ಉದ್ಯೋಗ ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂಕಹಳ್ಳಿ ಗ್ರಾಮದ ಸುಮಂತ್ ಎಂಬ ಡಿಪ್ಲೊಮಾ ಪದವೀಧರ ಪ್ರತಿಷ್ಟಿತ ಕಂಪನಿಯೊಂದಕ್ಕೆ ಉದ್ಯೋಗ ಅರಸಿ ಅರ್ಜಿ ಹಾಕಿದ್ದರು. ಸಂದರ್ಶನಕ್ಕೆ ಹಾಜರಾಗಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿರುವ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದಾರೆ. ಸೋಮವಾರ ಬೆಳಗ್ಗೆ 10ರ ಸುಮಾರಿಗೆ ಇವರ ಮೊಬೈಲ್ಗೆ ಪಾಸಿಟಿವ್ ಎಂದು ಸಂದೇಶ ಬಂದಿದೆ.
ಇದರಿಂದ ವಿಚಲಿತರಾದ ಸುಮಂತ್ ತನ್ನ ತಂದೆಯ ಜೊತೆ ಗ್ರಾಮದ ಹತ್ತಿರದಲ್ಲಿರುವ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಬೆಳಗ್ಗೆ 11ರ ಸುಮಾರಿಗೆ ಮತ್ತೆ ಗಂಟಲು ದ್ರವ ಕೊಟ್ಟು ಗುಂಡ್ಲುಪೇಟೆ ಕೋವಿಡ್ ಕೇರ್ ಸೆಂಟರಿಗೆ ದಾಖಲಾಗಿದ್ದಾರೆ.