ಚಾಮರಾಜನಗರ :ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಸಮಾಜವನ್ನಷ್ಟೇ ರಕ್ಷಿಸುವುದಲ್ಲ, ಪರಿಸರವನ್ನೂ ಉಳಿಸುತ್ತೇವೆ ಎಂದು ಚಾಮರಾಜನಗರ ಜಿಲ್ಲಾ ಪೊಲೀಸರು ಮುಂದಡಿ ಇಟ್ಟಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್ ಡಿ ಆನಂದಕುಮಾರ್ ನೇತೃತ್ವದಲ್ಲಿ ಅರಣ್ಯ ಸಂಚಾರಿ ದಳದ ಪೊಲೀಸರು, ಠಾಣಾ ಸರಹದ್ದು, ಕ್ವಾಟರ್ಸ್, ಪೊಲೀಸ್ ಇಲಾಖೆಗೆ ಒಳಪಟ್ಟ ಜಾಗಗಳಲ್ಲಿ ಗಿಡಗಳನ್ನು ನೆಡಲು ಪಣ ತೊಟ್ಟಿದ್ದಾರೆ. ಜಿಲ್ಲೆಯ ಪೊಲೀಸ್ ಠಾಣೆಗಳ ಆವರಣದಲ್ಲಿ ಉತ್ತಮ ಪರಿಸರ ನಿರ್ಮಾಣ ಜೊತೆಗೆ ಸಾರ್ವಜನಿಕರಿಗೆ ಪರಿಸರ ಪ್ರಜ್ಞೆ ಮೂಡಿಸುವುದು ಇದರ ಉದ್ದೇಶವಾಗಿದೆಯಂತೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್ ಡಿ ಆನಂದಕುಮಾರ್ ಈಟಿವಿಯೊಂದಿಗೆ ಮಾತನಾಡಿ, ಈಗಾಗಲೇ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಮ್ಮ ಠಾಣೆಗಳು, ಕಚೇರಿಗಳು, ಡಿಎಆರ್ ಮೈದಾನ, ಪೊಲೀಸ್ ಸ್ಥಿರಾಸ್ಥಿಗಳ ಖಾಲಿ ಸ್ಥಳಗಳನ್ನು ಗುರುತಿಸಿ ಗಿಡ ನೆಟ್ಟು ಅದು ಮರವಾಗುವ ತನಕ ಇಲಾಖೆ ಪೋಷಿಸುತ್ತದೆ ಎಂದರು.