ಚಾಮರಾಜನಗರ:ನಗರದ ಚಾಮರಾಜೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಜಿಲ್ಲಾ ದಸರಾಗೆ ಚಾಲನೆ ನೀಡಿದರು.
ಚಾಮರಾಜನಗರದಲ್ಲಿ ಸರಳ ದಸರಾಗೆ ಚಾಲನೆ: ಸಿಹಿ ಸುದ್ದಿ ಹಂಚಿಕೊಂಡ ಸಚಿವ ಸುರೇಶ್ ಕುಮಾರ್ - Chamarajanagar latest news
ಚಾಮರಾಜನಗರ ನಗರದ ಬಿ.ರಾಚಯ್ಯ ಜೋಡಿ ರಸ್ತೆಗೆ ನಗರಸಭೆ ವತಿಯಿಂದ ₹10 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಸಿ ಕತ್ತಲು ಮುಕ್ತ ರಸ್ತೆಯನ್ನಾಗಿ ಮಾಡಲಾಗಿದ್ದು, ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.
![ಚಾಮರಾಜನಗರದಲ್ಲಿ ಸರಳ ದಸರಾಗೆ ಚಾಲನೆ: ಸಿಹಿ ಸುದ್ದಿ ಹಂಚಿಕೊಂಡ ಸಚಿವ ಸುರೇಶ್ ಕುಮಾರ್ Drive to Simple Dussera in Chamarajanagar](https://etvbharatimages.akamaized.net/etvbharat/prod-images/768-512-9208123-thumbnail-3x2-sow.jpg)
ಜಿಲ್ಲಾ ದಸರಾ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಇಂದಿನ ಜಿಲ್ಲಾ ದಸರಾದಲ್ಲಿ ಭಾಗಿಯಾಗಲಿಲ್ಲ. ಆದರೆ ಈ ಹಬ್ಬದ ಸಮಯದಲ್ಲಿ ಜಿಲ್ಲೆಯ ಜನತೆಗೆ ಕೆಲ ಸಿಹಿ ಸುದ್ದಿಗಳನ್ನು ಹೇಳಬೇಕಿದೆ. ನಗರದ ಬಿ.ರಾಚಯ್ಯ ಜೋಡಿ ರಸ್ತೆಗೆ ನಗರಸಭೆ ವತಿಯಿಂದ ₹10 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪ ಅಳವಡಿಸಿ ಕತ್ತಲು ಮುಕ್ತ ರಸ್ತೆಯನ್ನಾಗಿ ಮಾಡಲಾಗಿದ್ದು, ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ.
ಹಾಗೆಯೇ ಎನ್ಹೆಚ್-209 ರಸ್ತೆಯು ನಗರಸಭೆ ವ್ಯಾಪ್ತಿಯಲ್ಲಿ 6 ಕಿ.ಮೀ. ಹಾದು ಹೋಗಿದ್ದು, ಗಾಳಿಪುರ ಮುಖ್ಯ ರಸ್ತೆ, ಸ್ಟೇಡಿಯಂ ರಸ್ತೆ, ಕುಲುಮೆ ರಸ್ತೆ ಹಾಗೂ 13 ಮತ್ತು 14ನೇ ವಾರ್ಡಿನ ಮುಖ್ಯ ರಸ್ತೆಗಳಲ್ಲಿ ವಿದ್ಯುತ್ ದೀಪ ಅಳವಡಿಸುವ ಬಗ್ಗೆ ನಗರಸಭೆ ವತಿಯಿಂದ ಅಂದಾಜು ₹ 112 ಲಕ್ಷಗಳಿಗೆ ಟೆಂಡರ್ ಕರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ರಸ್ತೆಗಳಿಗೆ ಎಲ್ಇಡಿ ದೀಪ ಅಳವಡಿಸಿ ಚಾಮರಾಜನಗರವನ್ನು ಸುಂದರ ನಗರವನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.