ಕರ್ನಾಟಕ

karnataka

By

Published : May 28, 2022, 3:06 PM IST

ETV Bharat / state

ವಿವಾಹೇತರ ಸಂಬಂಧ ಶಂಕೆ : ಪತ್ನಿ ಕೊಂದು ಠಾಣೆಗೆ ಶರಣಾದ ಪತಿ

ಹೆಂಡತಿ ಪರಪುರುಷನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಹೆಂಡತಿಯನ್ನು ಕೊಂದು ತಾನೇ ಬಂದು ಪೊಲೀಸ್​ ಠಾಣೆಗೆ ಬಂದು ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಪತಿ ಶರಣಾದರೂ ವಿವಿಧ ಆಯಾಮಗಳಿಂದ ತನಿಖೆ ನಡೆಯುತ್ತಿದೆ..

husband killed his wife: surrendered
ವಿವಾಹೇತರ ಸಂಬಂಧ ಶಂಕೆ: ಪತ್ನಿ ಕೊಂದು ಠಾಣೆಗೆ ಶರಣಾದ ಪತಿ

ಚಾಮರಾಜನಗರ :ಪರಪುರುಷನೊಟ್ಟಿಗೆ ಪತ್ನಿ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದನ್ನು ಕಂಡು ಪತ್ನಿಯನ್ನು ಕೊಂದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಾದಲವಾಡಿ ಸಮೀಪದ ಬೇಲದಕುಪ್ಪೆ ಎಂಬಲ್ಲಿ ನಡೆದಿದೆ. ಮಹಾದೇವಪ್ಪ(52) ಎಂಬಾತ ತನ್ನ ಪತ್ನಿ ಮಹದೇವಮ್ಮ(45) ಎಂಬಾಕೆಯನ್ನು ಮಚ್ಚಿನಿಂದ ಕೊಂದು ಠಾಣೆಗೆ ಬಂದು ಶರಣಾಗಿದ್ದಾನೆ.

ಪತ್ನಿಗೆ ಸಾಕಷ್ಟು ಬಾರಿ ಬುದ್ದಿವಾದ ಹೇಳಿದ್ದರೂ ಪತ್ನಿ ಆ ಪರಪುರುಷನ ಜೊತೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಡೇರಿಗೆ ಹಾಲು ಹಾಕಿ ಹಿಂತಿರುಗುವಾಗ ಸ್ನಾನದ ಮನೆಯಲ್ಲಿ ರಾಸಲೀಲೆಯನ್ನು ಕಂಡು ಮಚ್ಚಿನಿಂದ ಹೊಡೆದಿದ್ದರಿಂದ ಮಹಾದೇವಮ್ಮ ಸ್ಥಳದಲ್ಲೇ ಅಸುನೀಗಿದ್ದಾರೆ ಎನ್ನಲಾಗಿದೆ.

ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿವೆ. ಮದುವೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅನೈತಿಕ ಸಂಬಂಧದ ಕಾರಣ ಕೊಂದೆ ಎಂದು ಪತಿ ಪೊಲೀಸ್ ಠಾಣೆಗೆ ಶರಣಾದರೂ ವಿವಿಧ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತೆರಕಣಾಂಬಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮೈಸೂರಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ

ABOUT THE AUTHOR

...view details