ಕರ್ನಾಟಕ

karnataka

ETV Bharat / state

ಚಾಮರಾಜನಗರ: ಸೈಕಲ್ ವೀಲಿಂಗ್ ವಿಚಾರಕ್ಕೆ ಗುಂಪು ಘರ್ಷಣೆ; ಲಾಠಿ ಬೀಸಿದ ಪೊಲೀಸರು

ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

By

Published : Sep 4, 2022, 6:48 AM IST

Updated : Sep 4, 2022, 10:00 AM IST

Tight police vigil in the border district
ಗಡಿಜಿಲ್ಲೆಯಲ್ಲಿ ಬಿಗಿ ಪೊಲೀಸ್ ಪಹರೆ

ಚಾಮರಾಜನಗರ: ಸೈಕಲ್‌ ವೀಲಿಂಗ್‌ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು. ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಚಾರ್ಜ್‌ ನಡೆಸಿ ಗುಂ‌ಪುಗಳನ್ನು ಚದುರಿಸಿದ್ದಾರೆ. ಈ ಮೂಲಕ ಪರಿಸ್ಥಿತಿ ಕೈ ಮೀರದಂತೆ ನೋಡಿಕೊಂಡಿದ್ದಾರೆ.

ಗಡಿಜಿಲ್ಲೆಯಲ್ಲಿ ಬಿಗಿ ಪೊಲೀಸ್ ಪಹರೆ

ಇದಕ್ಕೂ ಮುನ್ನ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಎರಡೂ ಗುಂಪುಗಳು ಕೈ ಕೈ ಮಿಲಾಯಿಸಿವೆ. ಪೊಲೀಸರ ಸಮಯಪ್ರಜ್ಞೆಯಿಂದ ಗಲಾಟೆ ನಿಂತಿದೆ. ಸಂತೇಮರಹಳ್ಳಿ ವೃತ್ತ ಸಮೀಪದ ಸ್ಥಳಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು‌ ನಿಯೋಜಿಸಿದ್ದು ಪೊಲೀಸರು ರಾತ್ರಿ ಗಸ್ತು ತಿರುಗಿದ್ದಾರೆ. ಎರಡೂ ಕಡೆಯ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಬೈಕ್ ಟಚ್ ಆಯ್ತು ಅಂತ ಕಿರಿಕ್‌: ಕೋಮಾಗೆ ಹೋದ ಸವಾರ

Last Updated : Sep 4, 2022, 10:00 AM IST

ABOUT THE AUTHOR

...view details