ಕೊಳ್ಳೇಗಾಲ: ತಾಲೂಕಿನ ಸರಗೂರು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆಯೊಂದು ಸಂಪೂರ್ಣ ಭಸ್ಮವಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಬಣವೆ - ಬಣವೆಗೆ ಬೆಂಕಿ
ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆಯೊಂದು ಸಂಪೂರ್ಣ ಭಸ್ಮವಾಗಿರುವ ಘಟನೆ ಸರಗೂರು ಗ್ರಾಮದಲ್ಲಿ ನಡೆದಿದೆ.
![ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಬಣವೆ fire for fodder in kollegal taluk](https://etvbharatimages.akamaized.net/etvbharat/prod-images/768-512-10513249-1045-10513249-1612532768493.jpg)
ಮೇವಿನ ಬಣವೆಗೆ ಬೆಂಕಿ
ಇದನ್ನೂ ಓದಿ...ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ತೋಟಗಾರಿಕಾ ಅಧಿಕಾರಿ
ಸರಗೂರು ಗ್ರಾಮದ ಬಸವರಾಜು ಎಂಬವರಿಗೆ ಈ ಬಣವೆ ಸೇರಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಹುಲ್ಲನ್ನು ಸಂಗ್ರಹಿಸಿ ಬಣವೆ ಹಾಕಲಾಗಿತ್ತು. ಬಣವೆ ಸಮೀಪ ಹಾಕಿದ್ದ ಬೆಂಕಿ ಕಿಡಿ ಹಾರಿ ಈ ಅವಘಡ ನಡೆದಿದ್ದು, ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.