ಚಾಮರಾಜನಗರ:ಸಾರ್ವಜನಿಕ ನಿರ್ಬಂಧಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರ ಮನೆಮಂದಿ ಸುತ್ತಾಡಿ, ಕಾಡಿನಲ್ಲಿ ಕ್ರಿಕೆಟ್ ಆಡಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೂದಿಪಡಗ ಗೆಸ್ಟ್ ಹೌಸ್ ಬಳಿ ಈ ಘಟನೆ ನಡೆದಿದೆ.
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಉಪವಲಯ ಅರಣ್ಯಾಧಿಕಾರಿ ಸೈಯದ್ ಇಕ್ರಂ ಪಾಷಾ ಎಂಬುವವರ ಮೇಲೆ ಈ ಗಂಭೀರ ಆರೋಪ ಕೇಳಿಬಂದಿದೆ. ಇಕ್ರಂ ಪಾಷಾ, ಜುಲೈ 24ರಂದು ಹತ್ತಾರು ಕಾರುಗಳಲ್ಲಿ ಮನೆಮಂದಿಯನ್ನೆಲ್ಲಾ ಕರೆದುಕೊಂಡುವ ಬಂದು ಕೋರ್ ಏರಿಯಾದಲ್ಲಿ ಪ್ರವಾಸ ಮಾಡಿಸಿದ್ದಾರೆ. ಜೊತೆಗೆ ನಿರ್ಬಂಧಿತ ಪ್ರದೇಶದಲ್ಲಿ 25-30 ಮಂದಿ ಆಡಿದ್ದಾರೆ ಎನ್ನಲಾಗಿದೆ.