ಗುಂಡ್ಲುಪೇಟೆ:ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿರುವ ಪ್ರವಾಸಿತಾಣ ಸೇರಿದಂತೆ ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಆದರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಹೋಟೆಲ್, ರೆಸಾರ್ಟ್ಗಳು ಈ ಆದೇಶವನ್ನು ಗಾಳಿಗೆ ತೂರಿವೆ ಎಂಬ ಆರೋಪ ಕೇಳಿ ಬಂದಿವೆ.
ಡಿಸಿ ಆದೇಶ ಗಾಳಿಗೆ ತೂರಿದ ಗುಂಡ್ಲುಪೇಟೆ ಹೋಟೆಲ್, ರೆಸಾರ್ಟ್ ಮಾಲೀಕರು - ಗುಂಡ್ಲುಪೇಟೆ ಲೆಟೆಸ್ಟ್ ನ್ಯೂಸ್
ದಿನದಿಂದ ದಿನಕ್ಕೆ ಕೊರೊನಾ ಪ್ರಕರಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರವಾಸಿತಾಣ ಸೇರಿದಂತೆ ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳನ್ನು ಮುಚ್ಚಲು ಆದೇಶಿದ್ದಾರೆ. ಆದರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಹೋಟೆಲ್, ರೆಸಾರ್ಟ್ಗಳು ಈ ಆದೇಶವನ್ನು ಗಾಳಿಗೆ ತೂರಿವೆ ಎಂಬ ಆರೋಪ ಕೇಳಿ ಬಂದಿದೆ.

ಡಿಸಿ ಆದೇಶ ಗಾಳಿಗೆ ತೂರಿದ ಗುಂಡ್ಲುಪೇಟೆ ಹೋಟೆಲ್, ರೆಸಾರ್ಟ್ ಮಾಲೀಕರು
ಡಿಸಿ ಆದೇಶ ಗಾಳಿಗೆ ತೂರಿದ ಗುಂಡ್ಲುಪೇಟೆ ಹೋಟೆಲ್, ರೆಸಾರ್ಟ್ ಮಾಲೀಕರು
ತಾಲೂಕಿನ ಮೇಲುಕಾಮನಹಳ್ಳಿ ಬಳಿಯಿರುವ ವನವಿಹಾರ್ ಮತ್ತು ಖಾನ್ ರೆಸಾರ್ಟ್ ಮಾಲೀಕರು ಡಿಸಿ ಆದೇಶದ ನಡುವೆಯೇ ವ್ಯಾಪಾರ ನಡೆಸುತ್ತಿದ್ದು, ರೂಮ್ಗಳನ್ನು ಬಾಡಿಗೆಗೆ ನೀಡುತ್ತಿದ್ದಾರೆ. ಹಂಗಳ ನಾಡ ಕಚೇರಿಯ ಉಪ ತಹಸೀಲ್ದಾರ್ ರಾಜ್ಕುಮಾರ್ ಭೇಟಿ ನೀಡಿ ಹೋಟೆಲ್ ತೆರೆಯದಂತೆ ಸೂಚಿಸಿದ್ದರೂ ತಲೆಗೆ ಹಾಕಿಕೊಂಡಿಲ್ಲ ಎನ್ನಲಾಗುತ್ತಿದೆ.
ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರೂ ಸಹ ಹೋಟೆಲ್ಗಳು ರಾಜಾರೋಷವಾಗಿ ವ್ಯವಹಾರ ನಡೆಸುತ್ತಿರುವುದನ್ನು ನೋಡಿದರೆ ಸ್ಥಳೀಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.