ಕರ್ನಾಟಕ

karnataka

ಕೊರೊನಾ ವೈರಸ್‌ ಸೋಂಕಿಗೆ ಚಾಮರಾಜನಗರದಲ್ಲಿ ಮುಖ್ಯ ಶಿಕ್ಷಕ ಬಲಿ

By

Published : Oct 10, 2020, 5:45 PM IST

ಕೊಳ್ಳೇಗಾಲದ ಗುರುಮಲ್ಲೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಉಮಾಪತಿ ಎಂಬವರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

Head master died in Chamarajanagar due to Corona
ಕೊರೊನಾ ಮಹಾಮಾರಿಗೆ ಚಾಮರಾಜನಗರದಲ್ಲಿ ಮುಖ್ಯಶಿಕ್ಷಕ ಬಲಿ

ಚಾಮರಾಜನಗರ:ಕೊರೊನಾ ಮಹಾಮಾರಿಗೆ ಜಿಲ್ಲೆಯಲ್ಲಿ ಮುಖ್ಯಶಿಕ್ಷಕರೊಬ್ಬರು ಇಂದು ಬಲಿಯಾಗಿರುವ ಘಟನೆ ನಡೆದಿದೆ.

ಕೊಳ್ಳೇಗಾಲದ ಗುರುಮಲ್ಲೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಉಮಾಪತಿ ಎಂಬವರು ಕೆಲದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅಸುನೀಗಿದ್ದಾರೆ.

ಈ ಹಿಂದೆ ಗುಂಡ್ಲುಪೇಟೆಯ ದೈಹಿಕ ಶಿಕ್ಷಕರೊಬ್ಬರು ಮಹಾಮಾರಿಗೆ ಬಲಿಯಾಗಿದ್ದರು. ಇಲ್ಲಿಯವರೆಗೆ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಶಿಕ್ಷಕರಿಗೆ ಕೊರೊನಾ ವಕ್ಕರಿಸಿದೆ.

ABOUT THE AUTHOR

...view details