ಕರ್ನಾಟಕ

karnataka

ನಿರಂತರ ಮಳೆಗೆ ಗಡಿಜಿಲ್ಲೆ ಜನ ಹೈರಾಣ.. ಸೋರುವ ಛಾವಣಿಯಡಿ ಮಕ್ಕಳಿಗೆ ಪಾಠ!

By

Published : Nov 12, 2022, 1:03 PM IST

Updated : Nov 12, 2022, 4:55 PM IST

ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಹನೂರು ತಾಲೂಕಿನ ಪಳನಿಮೇಡು ಶಾಲೆಯ ಮೇಲ್ಛಾವಣಿ ದುರಸ್ತಿ ಭಾಗ್ಯ ಕಾಣದ ಹಿನ್ನೆಲೆ ಸುರಿಯುವ ಮಳೆ ನಡುವೆ ಮಕ್ಕಳಿಗೆ ಪಾಠ - ಪ್ರವಚನ ಮಾಡಿರುವ ಘಟನೆ ನಡೆದಿದೆ.

Heavy rain in Chamarajanagara
ನಿರಂತರ ಮಳೆಗೆ ಗಡಿಜಿಲ್ಲೆ ಜನ ಹೈರಾಣ

ಚಾಮರಾಜನಗರ: ಜಿಲ್ಲಾದ್ಯಂತ ಶುಕ್ರವಾರ ಮುಂಜಾನೆಯಿಂದ ಆರಂಭವಾದ ಜಿಟಿಜಿಟಿ ಮಳೆ ಶನಿವಾರವೂ ಮುಂದುವರೆದಿದ್ದು ಗಡಿಜಿಲ್ಲೆ ಜನರು ಹೈರಣಾಗಿದ್ದಾರೆ. ಮೂರ್ನಾಲ್ಕು ದಿನಗಳಿಂದ ಇದ್ದ ಚಳಿಯ ವಾತಾವರಣ ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದು, ಎರಡು ದಿನಗಳಿಂದ ಬಿಸಿಲಿನ ಕಿರಣವೇ ಮಾಯವಾಗಿದೆ. ಅರಣ್ಯ ಪ್ರದೇಶದಲ್ಲಿ ದಿನವಿಡೀ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ.

ಗ್ರಾಮೀಣ ರಸ್ತೆಗಳು ಕೆಸರುಮಯ ಆಗಿದ್ದು, ವಾಹನಗಳಲ್ಲಿ ಸಂಚರಿಸಲು ಜನರು ಪ್ರಯಾಸಪಟ್ಟರು. ಜೊತೆಗೆ ಕೃಷಿ ಚಟುವಟಿಕೆಗೂ ಪೆಟ್ಟು ಬಿದ್ದಿದೆ. ಶಾಲಾ - ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಮಳೆ ನಡುವೆ ಪರದಾಡಿದರು.

ಸೋರುವ ಛಾವಣಿಯಡಿ ಮಕ್ಕಳಿಗೆ ಪಾಠ

ಮಳೆ ನಡುವೆ ಪಾಠ: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಹನೂರು ತಾಲೂಕಿನ ಪಳನಿಮೇಡು ಶಾಲೆಯ ಮೇಲ್ಛಾವಣಿ ದುರಸ್ತಿ ಆಗದಿರುವುದರಿಂದ ಸುರಿಯುವ ಮಳೆ ನಡುವೆ ಮಕ್ಕಳಿಗೆ ಪಾಠ - ಪ್ರವಚನ ನಡೆಸಿರುವ ಆರೋಪ ಕೇಳಿಬಂದಿದೆ.

ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ 130 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 130 ವಿದ್ಯಾರ್ಥಿಗಳಿಗೆ ಕೇವಲ 5 ಕೊಠಡಿಗಳಿದ್ದು, ಇದರಲ್ಲಿ 2 ಮಂಗಳೂರು ಹಂಚಿನ ಕಟ್ಟಡಗಳು ತೀವ್ರ ಶಿಥಿಲಗೊಂಡಿವೆ. ಇದಲ್ಲದೇ ಕೋತಿಗಳ ಹಾವಳಿ ಹೆಚ್ಚಿರುವುದರಿಂದ ಛಾವಣಿ ಕುಸಿಯುವ ಹಂತದಲ್ಲಿದೆ.

ಇರುವ 3 ಕೊಠಡಿಗಳು ಆರ್​ಸಿಸಿ ಕಟ್ಟಡಗಳಾಗಿದ್ದರೂ ಸಹ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಗೋಡೆಗಳು ಶಿಥಿಲಗೊಂಡಿವೆ. ಇದರಿಂದ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ, ಶಾಲೆಗಳಿಗೆ ರಜೆ ಘೋಷಣೆ

Last Updated : Nov 12, 2022, 4:55 PM IST

ABOUT THE AUTHOR

...view details