ಕರ್ನಾಟಕ

karnataka

By

Published : May 23, 2021, 9:00 PM IST

ETV Bharat / state

ಪ್ರೀತಿಸಿ ಮದುವೆಯಾದವರು ಸಾವಿನಲ್ಲೂ ಒಂದಾದರು.. ಕೊರೊನಾಗೆ ಬೆಳಗ್ಗೆ ಪತಿ ಸಂಜೆ ಪತ್ನಿ ಬಲಿ!

ಕಳೆದ ಒಂದು ವಾರದ ಹಿಂದೆ ದಂಪತಿಗೆ ಕೋವಿಡ್ ದೃಢವಾಗಿತ್ತು. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಆದರೆ ವಿಧಿಯ ಆಟವೇ ಬೆರೆಯಾಗಿತ್ತು ಅನಿಸುತ್ತೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಸುದರ್ಶನ್ ಅಸುನೀಗಿದರೇ ಸಂಜೆ ಹೇಮಲತಾ ಕೂಡ ಕೊನೆಯುಸಿರೆಳೆದಿದ್ದಾರೆ.

ದಂಪತಿ ಸಾವು
ದಂಪತಿ ಸಾವು

ಚಾಮರಾಜನಗರ: ಪ್ರೀತಿಸಿ ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದ ದಂಪತಿ ಬಾಳಿಗೆ ಕೊರೊನಾ ಕೊಳ್ಳಿ ಇಟ್ಟಿದ್ದು ಒಂದೇ ದಿನ ಗಂಡ-ಹೆಂಡತಿ ಕೊರೊನಾಗೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಸುದರ್ಶನ(51) ಹಾಗೂ ಹೇಮಲತಾ (46) ಮೃತರು. ಕಳೆದ ಒಂದು ವಾರದ ಹಿಂದೆ ಈ ದಂಪತಿಗೆ ಕೋವಿಡ್ ದೃಢವಾಗಿತ್ತು. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಆದರೆ ವಿಧಿಯ ಆಟವೇ ಬೆರೆಯಾಗಿತ್ತು ಅನಿಸುತ್ತೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಸುದರ್ಶನ್ ಅಸುನೀಗಿದರೇ ಸಂಜೆ ಹೇಮಲತಾ ಕೂಡ ಕೊನೆಯುಸಿರೆಳೆದಿದ್ದಾರೆ.

ಸಾವಿನಲ್ಲೂ ಒಂದಾದ ಈ ದಂಪತಿಯ ಸಮಾಧಿಯನ್ನು ಅಕ್ಕಪಕ್ಕವೇ ಮಾಡಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಪುತ್ರ ಹೇಮಂತ್ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥನಾಗಿದ್ದಾನೆ.

ಹತ್ತಾರು ವರ್ಷಗಳಿಂದ ಶಾಲಾ-ಕಾಲೇಜು ಮುಂಭಾಗ ಚುರುಮುರಿ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಸುದರ್ಶನ್​​ ಗುಂಡ್ಲುಪೇಟೆ ಪಟ್ಟಣದಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದರು.

ABOUT THE AUTHOR

...view details