ಚಾಮರಾಜನಗರ: ಜಾತಿನಿಂದನೆ, ಪೊಲೀಸರ ಮೇಲೆ ಗುಂಪು ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿರುವ ಆರೋಪಿ ಫೇಸ್ಬುಕ್ನಲ್ಲಿ ಆ್ಯಕ್ಟಿವ್ ಆಗಿದ್ದು ಆತನನ್ನು ಬಂಧಿಸುವಲ್ಲಿ ಬೇಗೂರು ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಹೊಣಕನಪುರ ಗ್ರಾಮದ ಸಿದ್ದರಾಜು ಪೊಲೀಸರಿಂದ ತಲೆ ಮರೆಸಿಕೊಂಡು ಫೇಸ್ಬುಕ್ನಲ್ಲಿ ಆ್ಯಕ್ಟಿವ್ ಆಗಿದ್ದಾನೆ. ಕಳೆದ ಮಂಗಳವಾರ ರಾತ್ರಿ ಜಾತಿನಿಂದನೆ ಕೇಸ್ನಡಿ ಬಂಧಿಸಲು ತೆರಳಿದ್ದ ವೇಳೆ ಸಿದ್ದರಾಜು ಹಾಗೂ ಸಂಬಂಧಿಕರು ಐವರು ಪೊಲೀಸರ ಮೇಲೆ ಗುಂಪು ಹಲ್ಲೆ ನಡೆಸಿದ್ದರು. ಆ ವೇಳೆ, ಆರೋಪಿ ಸಿದ್ದರಾಜು ಪರಾರಿಯಾಗಿದ್ದ.