ಚಾಮರಾಜನಗರ: ನಾಪತ್ತೆಯಾಗಿದ್ದ ಗಿರಿಜನ ವ್ಯಕ್ತಿಯೋರ್ವ 5 ದಿನಗಳ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ ಗ್ರಾಮ ಕಣಿಯನಪುರ ಸಮೀಪ ನಡೆದಿದೆ.
ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ: ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ - ಕಣಿಯನಪುರ ವ್ಯಕ್ತಿ ಶವವಾಗಿ ಪತ್ತೆ
ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ ಗ್ರಾಮದ ವ್ಯಕ್ತಿಯ ಶವ ಇಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಶವ
ಕಣಿಯನಪುರ ಗ್ರಾಮದ ಬೊಮ್ಮ(45) ಮೃತ ದುರ್ದೈವಿ. ಮೃತರು ಹಲವು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಕುಂದಕೆರೆ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಪ್ರತಿಕ್ರಿಯಿಸಿ, ಇದುವರೆಗೆ ಕುಟುಂಬಸ್ಥರು ಆನೆ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿಲ್ಲ. ತನಿಖೆ ನಡೆಸಿದಾಗಲಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದರು.