ಕರ್ನಾಟಕ

karnataka

By

Published : Nov 22, 2020, 3:39 PM IST

ETV Bharat / state

'ಯತ್ನಾಳ್ ಓರ್ವ ಬಕೆಟ್ ರಾಜಕಾರಣಿ'.. ಕನ್ನಡಪರ ಹೋರಾಟಗಾರರ ಆಕ್ರೋಶ

ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ಯತ್ನಾಳ್ ಭಾವಚಿತ್ರಕ್ಕೆ ಟೊಮ್ಯಾಟೊಗಳನ್ನು ಹೊಡೆದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು..

Chamarajnagar
ಕನ್ನಡಪರ ಹೋರಾಟಗಾರ

ಚಾಮರಾಜನಗರ :ಕನ್ನಡಪರ ಹೋರಾಟಗಾರರನ್ನು ಹೀಗಳೆದಿದ್ದ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ನಗರದಲ್ಲಿ ಕನ್ನಡಪರ ಹೋರಾಟಗಾರರು ಟೊಮ್ಯಾಟೊ ಚಳವಳಿ ಮೂಲಕ ಪ್ರತಿಭಟಿಸಿದರು.

ಪ್ರತಿಭಟನೆ ನಡೆಸಿದ ಕನ್ನಡಪರ ಹೋರಾಟಗಾರರು

ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ಯತ್ನಾಳ್ ಭಾವಚಿತ್ರಕ್ಕೆ ಟೊಮ್ಯಾಟೊಗಳನ್ನು ಹೊಡೆದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಕನ್ನಡಪರ ಹೋರಾಟಗಾರ ಚಾ‌.ರಂ.ಶ್ರೀನಿವಾಸಗೌಡ ಮಾತನಾಡಿ, ಯತ್ನಾಳ್ ಓರ್ವ ಬಕೆಟ್ ರಾಜಕಾರಣಿ, ಕನ್ನಡಪರ ಹೋರಾಟಗಾರರ ಬಗ್ಗೆ ಅರಿಯದೇ ಕೇವಲವಾಗಿ ಮಾತನಾಡಿರುವುದು ಸರಿಯಲ್ಲ.

ಕೂಡಲೇ ಅವರು ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೇ ಅವರನ್ನು ಹುಚ್ಚಾಸ್ಪತ್ರೆಗೆ ದಾಖಲಿಸಬೇಕು ಎಂದು ಆಕ್ರೋಶ ಹೊರ ಹಾಕಿದರು.

ABOUT THE AUTHOR

...view details