ಕರ್ನಾಟಕ

karnataka

By

Published : May 21, 2020, 3:34 PM IST

ETV Bharat / state

ಕೊಳ್ಳೇಗಾಲದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ಪ್ರತಿಭಟನೆ: ರಸ್ತೆ ತಡೆದ ರೈತರ ಬಂಧನ

ನಗರದ ಆರ್​​ಎಂ‌ಸಿ ಮಾರುಕಟ್ಟೆಯಿಂದ ಮೆರವಣಿಗೆ ಹೊರಟ ರೈತ ಸಂಘದ ಕಾರ್ಯಕರ್ತರು, ಕೊಳ್ಳೇಗಾಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸರ್ಕಲ್​​ನಲ್ಲಿ ಸಚಿವ ಮಾಧುಸ್ವಾಮಿ ಪ್ರತಿಕೃತಿ ಸುಡಲು‌ ಮುಂದಾದರು. ಈ ವೇಳೆ ಪ್ರತಿಭಟನಾಕಾರನ್ನು‌ ಪೊಲೀಸರು ತಡೆದು ಪ್ರತಿಕೃತಿ ಕಿತ್ತುಕೊಂಡ ಘಟನೆ ನಡೆದಿದೆ.

Karnataka State Farmers' Union and army activists protest against Madhuswamy
ಕೊಳ್ಳೇಗಾಲದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ಪ್ರತಿಭಟನೆ

ಕೊಳ್ಳೇಗಾಲ:ಸಚಿವ ಮಾಧುಸ್ವಾಮಿ ನಡೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೊಳ್ಳೇಗಾಲದಲ್ಲಿ ಸಚಿವ ಮಾಧುಸ್ವಾಮಿ ವಿರುದ್ಧ ಪ್ರತಿಭಟನೆ

ನಗರದ ಆರ್​​ಎಂ‌ಸಿ ಮಾರುಕಟ್ಟೆಯಿಂದ ಮೆರವಣಿಗೆ ಹೊರಟ ರೈತ ಸಂಘದ ಕಾರ್ಯಕರ್ತರು, ಕೊಳ್ಳೇಗಾಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸರ್ಕಲ್​​ನಲ್ಲಿ ಸಚಿವ ಮಾಧುಸ್ವಾಮಿ ಪ್ರತಿಕೃತಿ ಸುಡಲು‌ ಮುಂದಾದರು. ಈ ವೇಳೆ ಪ್ರತಿಭಟನಾಕಾರನ್ನು‌ ಪೊಲೀಸರು ತಡೆದು ಪ್ರತಿಕೃತಿ ಕಿತ್ತುಕೊಂಡ ಘಟನೆ ನಡೆದಿದೆ.

ಇದರಿಂದ ರೊಚ್ಚಿಗೆದ್ದ ರೈತರು, ರಸ್ತೆ ತಡೆ ನಡೆಸಲು ಮುಂದಾಗಿದ್ದಲ್ಲದೆ ಮಾಧುಸ್ವಾಮಿ‌ ವಿರುದ್ಧ ಘೋಷಣೆ ಕೂಗಿದರು. ಸರ್ಕಾರ ಸಚಿವ ಮಾಧುಸ್ವಾಮಿಯನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ರೈತ ಸಂಘದ ಅಧ್ಯಕ್ಷ ಗೌಡೇಗೌಡ ಎಚ್ಚರಿಕೆ ನೀಡಿದರು. ನಂತರ ಪ್ರತಿಭಟನೆ ನಿಲ್ಲಿಸದ ಪ್ರತಿಭಟನಾಕರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋದರು.

ABOUT THE AUTHOR

...view details