ಕರ್ನಾಟಕ

karnataka

ETV Bharat / state

ಕೊಳ್ಳೇಗಾಲ: ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಕೊರೊನಾಗೆ ಬಲಿ! - chamrajnagara corona news

ಕೊಳ್ಳೇಗಾಲ ಉಪವಿಭಾಗದ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗಣೇಶ್ ಕುಮಾರ್​​ಗೆ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

kollegala dr. ganesh died by corona !
ಡಾ. ಗಣೇಶ್ ಕುಮಾರ್ ನಿಧನ

By

Published : Apr 28, 2021, 10:49 AM IST

ಚಾಮರಾಜನಗರ: ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಮಂಗಳವಾರ ನಡೆದಿದೆ.

ಕೊಳ್ಳೇಗಾಲ ಉಪವಿಭಾಗದ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗಣೇಶ್ ಕುಮಾರ್ ಮೃತ ದುರ್ದೈವಿ. ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟು ಮೈಸೂರಿನ ತಮ್ಮ ನಿವಾಸದಲ್ಲಿ ಹೋಂ ಐಸೋಲೇಷನ್​​ನಲ್ಲಿದ್ದರು. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆ ಮೈಸೂರಿನ ಮೇಟಗಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಕೋವಿಡ್ 2ನೇ ಅಲೆಗೆ ಸಂಕಷ್ಟದಲ್ಲಿ ಹುಬ್ಬಳ್ಳಿ-ಧಾರವಾಡದ ವ್ಯಾಪಾರಸ್ಥರು

ಡಾ. ಗಣೇಶ್ ಕುಮಾರ್ ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು‌. ಕರ್ತವ್ಯದ ವೇಳೆಯೇ ಕೊರೊನಾ ದೃಢಪಟ್ಟಿತ್ತು.

ABOUT THE AUTHOR

...view details