ಕೊಳ್ಳೇಗಾಲ(ಚಾಮರಾಜನಗರ): ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿಯೊಂದು ಹಳ್ಳಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಮುಡಿಗುಂಡ ಗ್ರಾಮದ ಸೇತುವೆ ಬಳಿ ನಡೆದಿದೆ.
ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ: ಚಾಲಕ ಸ್ಥಳದಲ್ಲೇ ಸಾವು - Lorry which crashed into a ditch
ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನ ಯಶವಂತಪುರದಿಂದ ಮೆಟ್ಟುಪಾಳ್ಯಗೆ ಹೊರಟಿದ್ದ ಲಾರಿಯೊಂದು ಮುಡಿಗುಂಡ ರಸ್ತೆ ಮಾರ್ಗದಲ್ಲಿ ಹಳ್ಳಕ್ಕೆ ಉರುಳಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ: ಸ್ಥಳದಲ್ಲಿಯೇ ಚಾಲಕ ಸಾವು
ತಮಿಳುನಾಡಿನ ಊಟಿಯ ನಿವಾಸಿ ಕಾರ್ತಿಕ್ (28) ಮೃತ ವ್ಯಕ್ತಿ. ಈತ ಬೆಂಗಳೂರಿನ ಯಶವಂತಪುರದಿಂದ ಲಾರಿಯಲ್ಲಿ ಆಲೂಗಡ್ಡೆ ತುಂಬಿಕೊಂಡು ಬರುತ್ತಿದ್ದ ವೇಳೆ ತಾಲೂಕಿನ ಮುಡಿಗುಂಡ ಸೇತುವೆ ಬಳಿ ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ನಾಗರಾಜು, ಸಿಪಿಐ ಶ್ರೀಕಾಂತ್ ಭೇಟಿ ನೀಡಿ ಪರಿಶೀಲಿಸಿದರು.