ಕರ್ನಾಟಕ

karnataka

ETV Bharat / state

ಹುಲಿಗಳ ತವರಾದ ಚಾಮರಾಜನಗರ: ಗಡಿ ಜಿಲ್ಲೆಯ 3ನೇ ಟೈಗರ್ ರಿಸರ್ವ್ ಶೀಘ್ರ ಘೋಷಣೆ - chamarajanagara tiger reserve

ಮಲೆಮಹದೇಶ್ವರ ವನ್ಯಜೀವಿ ಧಾಮವು ಚಾಮರಾಜನಗರ ಜಿಲ್ಲೆಯ ಮೂರನೇ ಹುಲಿ ಸಂರಕ್ಷಿತ ಪ್ರದೇಶವಾಗಿ ಶೀಘ್ರದಲ್ಲೇ ಘೋಷಣೆಯಾಗಲಿದೆ ಎಂದು ತಿಳಿದು ಬಂದಿದೆ.

male-mahadeshwara-wildlife-sanctuary-to-be-tiger-reserve-soon
ಹುಲಿಗಳ ನಾಡಾದ ಚಾಮರಾಜನಗರ: ಗಡಿಜಿಲ್ಲೆಯ ಮೂರನೇ ಟೈಗರ್ ರಿಸರ್ವ್ ಶೀಘ್ರ ಘೋಷಣೆ

By

Published : Sep 23, 2021, 11:24 AM IST

ಚಾಮರಾಜನಗರ: ಗಡಿಜಿಲ್ಲೆಯಾದ ಚಾಮರಾಜನಗರ ಈಗ ಹುಲಿಗಳ ತಾಣವಾಗಿದ್ದು, ಜಿಲ್ಲೆಯ ಮೂರನೇ ಹುಲಿ ಸಂರಕ್ಷಿತ ಪ್ರದೇಶವಾಗಿ ಮಲೆಮಹದೇಶ್ವರ ವನ್ಯಜೀವಿ ಧಾಮ ಘೋಷಣೆಯಾಗುವ ಕಾಲ ಸನ್ನಿಹಿತವಾಗಿದೆ‌.

ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಎಫ್ಒ ಏಡುಕುಂಡಲು, ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲು ಎನ್​ಟಿಸಿಎ ಅನುಮೋದನೆ ಉಲ್ಲೇಖಿಸಿ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇನ್ನೊಂದು ವಾರದಲ್ಲಿ ಸರ್ಕಾರದಿಂದ ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

1,224 ಚದರ ಕಿ.ಮೀ ಪ್ರಾದೇಶಿಕ ಅರಣ್ಯದ ಪೈಕಿ 906.18 ಚದರ ಕಿ.ಮೀ ಪ್ರದೇಶವನ್ನು 2013ರಲ್ಲಿ ಮಲೆಮಹದೇಶ್ವರ ವನ್ಯಧಾಮ ಎಂದು ಘೋಷಿಸಲಾಗಿತ್ತು. ವರ್ಷದಿಂದ ವರ್ಷಕ್ಕೆ ಅರಣ್ಯದಲ್ಲಿ ವ್ಯಾಘ್ರಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಅರಣ್ಯ ಇಲಾಖೆಯು 2018ರಲ್ಲಿ ಈ ವನ್ಯಧಾಮವನ್ನೂ ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಲು ಪ್ರಯತ್ನ ಆರಂಭಿಸಿತ್ತು. ಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು.

ವನ್ಯಜೀವಿ ಧಾಮದಲ್ಲಿ ಕಂಡುಬಂದ ಹುಲಿ ಮರಿಗಳು

ವನ್ಯಧಾಮ ಎಂದು ಘೋಷಣೆಯಾದ ಎಂಟು ವರ್ಷಗಳ ಬಳಿಕ ಹುಲಿ ಸಂರಕ್ಷಿತ ಪ್ರದೇಶವಾಗಿ ಬದಲಾಗುತ್ತಿದೆ‌‌. 2012ರಲ್ಲಿ ಸ್ವಾಭಾವಿಕವಾಗಿ ಮೃತಪಟ್ಟ ಹುಲಿ ಕಳೇಬರ ಪತ್ತೆಯಾಗಿತ್ತು. ಅದಾದ ಬಳಿಕ 2018ರಲ್ಲಿ ಹುಲಿ ಮರಿಗಳು, ಹುಲಿಗಳು ಗಣತಿ ಕ್ಯಾಮರಾಗೆ ಸೆರೆಯಾಗಿವೆ, ಸದ್ಯ 20-25 ಹುಲಿಗಳು ವನ್ಯಜೀವಿ ಧಾಮದಲ್ಲಿವೆ ಎಂದು ಏಡುಕುಂಡಲು ತಿಳಿಸಿದ್ದಾರೆ.

ಹುಲಿ ಸಂರಕ್ಷಿತ ಪ್ರದೇಶ ಘೋಷಣೆಯಾದ ಬಳಿಕ ಜಿಲ್ಲೆಯೊಂದರಲ್ಲೇ ಮೂರು 'ಟೈಗರ್ ರಿಸರ್ವ್' ಇರುವ ಭಾರತದ ಏಕೈಕ ಜಿಲ್ಲೆಯಾಗಿ ಚಾಮರಾಜನಗರ ಹೊರಹೊಮ್ಮಲಿದೆ.

ಇದನ್ನೂ ಓದಿ:ಬಾಗಲಕೋಟೆ: ಬರೋಬ್ಬರಿ 3.25 ಲಕ್ಷ ರೂ.ಗೆ ಮಾರಾಟವಾದ ಕಿಲಾರಿ ಹೋರಿ..! ಏನಿದರ ಸ್ಪೆಷಾಲಿಟಿ?

ABOUT THE AUTHOR

...view details