ಚಾಮರಾಜನಗರ :ಗ್ರಾಮದೇವತೆ ಹಬ್ಬ ಬಂತೆಂದರೆ ಭರ್ಜರಿ ಊಟ, ನೃತ್ಯ, ದೇವರ ಪೂಜೆ, ಬಾಯಿಗೆ ಬೀಗ ಇರುವುದು ಸಾಮಾನ್ಯ. ಆದರೆ, ಇಲ್ಲಿ ಹತ್ತಾರು ಭಕ್ತರು ಮುಳ್ಳಿನ ಬೇಲಿಗೆ ಹಾರಿ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಾರೆ.
ಯಳಂದೂರು ತಾಲೂಕಿನ ಗೂಳಿಪುರ ಗ್ರಾಮದಲ್ಲಿ ಮಾರಮ್ಮನ ಹಬ್ಬದ ಪ್ರಯುಕ್ತ ಉರುಕಾತಮ್ಮ, ಕುಂಟು ಮಾರಮ್ಮ, ಮಂಟೇಸ್ವಾಮಿ ಸೇರಿ ನಾನಾ ದೇವರನ್ನು ಪೂಜಿಸುವ ಭಕ್ತರು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿಶೇಷ ಪೂಜೆ ಪುನಸ್ಕಾರ, ಮಡೆ, ನೈವೇದ್ಯ ಅರ್ಪಿಸಿ ಸಂಜೆ ವೇಳೆಗೆ ದೇವಾಲಯದ ಮುಂಭಾಗ ಇರುವ ಜಮೀನಿನ ಮುಳ್ಳಿನ ಬೇಲಿಗೆ ಹಾರಿ ಭಕ್ತಿ ಪರಾಕಾಷ್ಠೆ ಮೆರೆಯುತ್ತಾರೆ.