ಕರ್ನಾಟಕ

karnataka

ETV Bharat / state

ಕೊರೊನಾಗೆ ಗೆಳೆಯ ಬಲಿ: ಸ್ನೇಹಿತನ ಮಡದಿಗೆ ಬಾಳು ಕೊಟ್ಟ ಚಾಮರಾಜನಗರದ ಯುವಕ - ಗೆಳೆಯನ ಪತ್ನಿಯನ್ನು ಮದುವೆಯಾದ ಲೋಕೇಶ್

ಚಾಮರಾಜನಗರ ತಾಲೂಕಿನ ನಂಜದೇವನಪುರ ಗ್ರಾಮದ ಲೋಕೇಶ್ ಎಂಬುವರು ಗೆಳೆಯನ ಪತ್ನಿಯನ್ನು ಮದುವೆಯಾಗಿದ್ದಾರೆ. ಪತಿಯ ಸಾವಿನಿಂದ ಕಂಗೆಟ್ಟ ಅಂಬಿಕಾ, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಚೇತನ್‌ಕುಮಾರ್‌ ಗೆಳೆಯ ಲೋಕೇಶ್ ಅವರನ್ನು ಮದುವೆಯಾಗಿ ಅವರ ಬಾಳಿಗೆ ಬೆಳಕಾಗಿದ್ದಾರೆ.

A model wedding in Chamarajanagar
ಚಾಮರಾಜನಗರದಲ್ಲೊಂದು ಮಾದರಿ ಮದುವೆ

By

Published : Feb 7, 2022, 11:49 AM IST

Updated : Feb 8, 2022, 7:31 PM IST

ಚಾಮರಾಜನಗರ:ಧರ್ಮ, ಜಾತಿ, ವಯಸ್ಸು, ಸಂಬಂಧ ಮೀರಿದ ಬಂಧ ಒಂದಿದ್ದರೇ ಅದು ಗೆಳೆತನ ಮಾತ್ರ. ಇದಕ್ಕೆ ನಿದರ್ಶನ ಎಂಬಂತೆ ಅಪರೂಪ ಹಾಗೂ ಮಾದರಿ ಮದುವೆಯೊಂದು ನಡೆದಿದ್ದು, ಸ್ನೇಹಿತನ ಮಡದಿಗೆ ಗೆಳೆಯ ಬಾಳು ಕೊಟ್ಟ ಘಟನೆ ನಡೆದಿದೆ.

ಚಾಮರಾಜನಗರದಲ್ಲೊಂದು ಮಾದರಿ ಮದುವೆ

ಚಾಮರಾಜನಗರ ತಾಲೂಕಿನ ನಂಜದೇವನಪುರ ಗ್ರಾಮದ ಲೋಕೇಶ್ ಎಂಬುವರು ಗೆಳೆಯನ ಪತ್ನಿಯನ್ನು ಮದುವೆಯಾಗುವ ಮೂಲಕ ಪತಿ ಕಳೆದುಕೊಂಡು ಕಂಗಾಲಾಗಿದ್ದಾಕೆಯ ಬಾಳಿಗೆ ಬೆಳಕಾಗಿದ್ದಾರೆ. ಜ. 27ರಂದು ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಸರ್ಪಭೂಷಣ ಶಿವಯೋಗಿಗಳ ಮಠದ ಆವರಣದಲ್ಲಿ ಈ ಆದರ್ಶ ಮದುವೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಚಾಮರಾಜನಗರದಲ್ಲೊಂದು ಮಾದರಿ ಮದುವೆ

ಏನಿದು ಕಲ್ಯಾಣ-ಏನಿದು ಗೆಳೆತನ: ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಚೇತನ್‌ಕುಮಾರ್‌ (41) ಮತ್ತು ಹನೂರು ಪಟ್ಟಣದ ಅಂಬಿಕಾ (30) 8 ವರ್ಷಗಳ ಹಿಂದೆ ವಿವಾಹವಾಗಿದ್ದರು. ಚೇತನ್‌ಕುಮಾರ್‌ ಅವರು ಬೆಂಗಳೂರಿನ ಖಾಸಗಿ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದರು. ಕೋವಿಡ್‌ ಎರಡನೇ ಅಲೆ ಸಂದರ್ಭದಲ್ಲಿ ಚೇತನ್‌ಕುಮಾರ್‌ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದರು.

ಇದನ್ನೂ ಓದಿ:ದೆಹಲಿಗೆ ತೆರಳಿದ ಸಿಎಂ: ಆಕಾಂಕ್ಷಿಗಳಲ್ಲಿ ಗರಿಗೆದರಿದ ಕುತೂಹಲ

ಪತಿಯ ಸಾವಿನಿಂದ ಕಂಗೆಟ್ಟ ಅಂಬಿಕಾ, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಚೇತನ್‌ಕುಮಾರ್‌ ಗೆಳೆಯ, ಎಂ.ಲೋಕೇಶ್‌ ಅವರು ಅಂಬಿಕಾಗೆ ಸಾಂತ್ವನ ಹೇಳಿ, ತನ್ನ ಗೆಳೆಯನ ಕುಟುಂಬಕ್ಕೆ ಆಸರೆಯಾಗಿ ನಿಲ್ಲಲು ನಿರ್ಧರಿಸಿದರು.

ಚಾಮರಾಜನಗರದಲ್ಲೊಂದು ಮಾದರಿ ಮದುವೆ

ತನ್ನ ಗೆಳೆಯನ ಪತ್ನಿಯನ್ನು ಮದುವೆಯಾಗಲು ನಿರ್ಧರಿಸಿ, ಅಂಬಿಕಾ ತಂದೆ, ತಾಯಿಯ ಬಳಿ ಹಾಗೂ ಚೇತನ್‌ಕುಮಾರನ ತಂದೆ, ತಾಯಿಯ ಹತ್ತಿರ ಈ ವಿಷಯವನ್ನು ಪ್ರಸ್ತಾಪಿಸಿದರು. ಅವರೆಲ್ಲರ ಮನವೊಲಿಕೆ ಮಾಡಿದ ನಂತರ ಅಂಬಿಕಾ ಮದುವೆಗೆ ಒಪ್ಪಿದ್ದಾರೆ. ಲೋಕೇಶ್‌ ಅವರು ಅಂಬಿಕಾ ಅವರನ್ನು ಪುನರ್‌ ವಿವಾಹವಾಗುವ ಮೂಲಕ ಮಾದರಿಯಾಗಿ ಗೆಳೆಯನ ಕುಟುಂಬಕ್ಕೆ ಆಸರೆಯಾಗಿದ್ದಾರೆ.

Last Updated : Feb 8, 2022, 7:31 PM IST

ABOUT THE AUTHOR

...view details