ಕರ್ನಾಟಕ

karnataka

ಹೂಗ್ಯಂ ಜಲಾಶಯಕ್ಕೆ ಹಾರಿ ತಾಯಿ-ಮಗ ಆತ್ಮಹತ್ಯೆ..! ‌

By

Published : Feb 4, 2021, 1:03 PM IST

ಹೂಗ್ಯಂ‌ ಗ್ರಾಮದ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬ ಕಲಹದಿಂದ ಈ ದುರಂತ ನಡೆದಿರುವ ಶಂಕೆ ವ್ಯಕ್ತವಾಗಿದೆ.

suicide
ತಾಯಿ-ಮಗ ಆತ್ಮಹತ್ಯೆ

ಚಾಮರಾಜನಗರ: ತಾಯಿ, ಮಗ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಹೂಗ್ಯಂ‌ ಗ್ರಾಮದಲ್ಲಿ ನಡೆದಿದೆ.

ತಮಿಳುನಾಡಿನ ಬರಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಜ್ಜಲ ಪಾಳ್ಯ ಗ್ರಾಮದ ಚಿನ್ನಮ್ಮ(35), ಮಗ ಮಹದೇವಸ್ವಾಮಿ(14) ಆತ್ಮಹತ್ಯೆಗೆ ಶರಣಾದವರು. ತಮಿಳುನಾಡು ಮೂಲದಿಂದ ಕುಟುಂಬ ಸಮೇತ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಬಂದು ನೆಲೆಸಿದ್ದ ಇವರು, ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಆಗಿಂದಾಗ್ಗೆ ನಡೆಯುತ್ತಿದ್ದ ಕುಟುಂಬ ಕಲಹ‌ ಬುಧವಾರ ರಾತ್ರಿ ಅತಿರೇಕಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬುಧವಾರ ರಾತ್ರಿ ಮಗನೊಂದಿಗೆ ತಾಯಿ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಗುರುವಾರ ಬೆಳಗ್ಗೆ ಗ್ರಾಮಸ್ಥರು ನೀರಿನಲ್ಲಿ ತೇಲುತ್ತಿರುವ ಶವಗಳನ್ನು ನೋಡಿ ರಾಮಪುರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ABOUT THE AUTHOR

...view details