ಗುಂಡ್ಲುಪೇಟೆ: ಲಾಕ್ಡೌನ್ ಸಡಿಲಿಕೆ ಬಳಿಕ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಗೆ ಅವಕಾಶವಿದ್ದರೂ ಜನರು ಮಾತ್ರ ಆಗಮಿಸುತ್ತಿಲ್ಲ.
ಜೂನ್ 8 ರಿಂದ ಲಾಕ್ಡೌನ್ ಸಡಿಲಿಕೆಗೊಳಿಸಿ ಸರ್ಕಾರ ಸೂಚಿಸಿದ ನಿಯಮಗಳನ್ನು ಪಾಲನೆ ಮಾಡಿಕೊಂಡು ಸಫಾರಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಕೋವಿಡ್ 19 ಭಯದಿಂದ ಪ್ರವಾಸಿಗರು ಸಫಾರಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮಾರ್ಚ್ ತಿಂಗಳಿನಿಂದ ಜೂನ್ ಅಂತ್ಯದ ವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ, ಕೊರೊನಾ ಭಯದಿಂದ ಜನರು ಆಗಮಿಸುತ್ತಿಲ್ಲ ಎಂದು ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್ ತಿಳಿಸಿದರು.