ಕರ್ನಾಟಕ

karnataka

ETV Bharat / state

ಬ್ಯಾಂಕ್ ಎಟಿಎಂಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆಯಿಲ್ಲ: ಸಾರ್ವಜನಿಕರ ಆಕ್ರೋಶ - Gundlupete latest news

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪಟ್ಟಣದಲ್ಲಿರುವ ಬ್ಯಾಂಕ್​​ಗಳಲ್ಲಿ ಸ್ಯಾನಿಟೈಸರ್ ಇಟ್ಟಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆ
ಗುಂಡ್ಲುಪೇಟೆ

By

Published : Jul 18, 2020, 12:57 PM IST

ಗುಂಡ್ಲುಪೇಟೆ:ಪಟ್ಟಣದಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂ ಮುಂದೆ ಕೊರೊನಾ ಸೋಂಕು ತಪಾಸಣೆ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡದಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿನಿತ್ಯ ಹಣ ಡ್ರಾ ಮಾಡಲು ನೂರಾರು ಮಂದಿ ಆಗಮಿಸುತ್ತಾರೆ. ಅದರಲ್ಲಿ ಹೆಚ್ಚಿನ ಮಂದಿ ಮಾಸ್ಕ್ ಧರಿಸದೆ ವಹಿವಾಟು ನಡೆಸುತ್ತಾರೆ. ಹೀಗಿದ್ದರೂ ಸಹ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ವರ್ಗದವರು ಕ್ರಮ ವಹಿಸಿಲ್ಲ. ತಾಲೂಕಿನ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರೂ ಅದನ್ನು ತಡೆಗಟ್ಟಲು ಸರ್ಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿಯಮವನ್ನು ಗಾಳಿಗೆ ತೂರಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಹಲವು ಬ್ಯಾಂಕ್​​ಗಳಲ್ಲಿ ಇದೇ ಕಥೆ:

ಪಟ್ಟಣದಲ್ಲಿರುವ ಎಸ್​ಬಿಎಂ, ಕೆನರಾ, ಸಿಂಡಿಕೇಟ್, ಕಾವೇರಿ ಗ್ರಾಮೀಣ ಬ್ಯಾಂಕ್​​ಗಳಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪಾಲಿಸಬೇಕಾದ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಪಟ್ಟಣದ ನಿವಾಸಿ ಜಿ.ಆರ್.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details