ಚಾಮರಾಜನಗರ: ಜಾತ್ರೆಯಲ್ಲಿ ಕುರಿಗಳ ರಕ್ತವನ್ನು ಕುಡಿದು ದೇವರಿಗೆ ಸಂಪ್ರೀತಗೊಳಿಸಿದ ವಿಲಕ್ಷಣ ಘಟನೆ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿಯಲ್ಲಿ ರಾತ್ರಿ ನಡೆದಿದೆ.
ಪ್ರತಿ ಪಾಲ್ಗುಣ ಮಾಸದಲ್ಲಿ ನಡೆಯುವ ಗ್ರಾಮದ ದೊಡ್ಡಮ್ಮತಾಯಿ ಜಾತ್ರೆಯಲ್ಲಿ ಕುರಿ ರಕ್ತ ಹೀರುವ ಸಂಪ್ರದಾಯ ನಡೆದಿದೆ. ಅರ್ಚಕ ಕುರಿ ರಕ್ತ ಹೀರುವ ವಿಡಿಯೋ ಈಟಿವಿ ಭಾರತಕ್ಕೆ ಲಭ್ಯವಾಗಿದ್ದು, 60ಕ್ಕೂ ಹೆಚ್ಚು ಕುರಿಗಳ ಬಲಿ ನಡೆದಿದೆ ಎಂದು ಭಕ್ತಾದಿಯೊಬ್ಬರು ತಿಳಿಸಿದ್ದಾರೆ.
ಕುರಿಗಳ ಕತ್ತು ಕಚ್ಚಿ ರಕ್ತ ಕುಡಿದ ಅರ್ಚಕ! ದೊಡ್ಡಮ್ಮತಾಯಿ ರಥದಲ್ಲಿ ನಿಂತಿರುವ ಅರ್ಚಕನಿಗೆ ಅಲ್ಲೇ ಬಲಿಕೊಟ್ಟ ಕುರಿಯನ್ನು ನೀಡಿದಾಗ ಹಲ್ಲಿನಿಂದ ಕಚ್ಚಿ ರಕ್ತ ಹೀರಿದರೆ ದೇವರನ್ನು ಸಂತೃಪ್ತಿಗೊಳಿಸಿದ ಹಾಗೆ ಎಂಬುದು ಭಕ್ತಾಧಿಗಳ ನಂಬಿಕೆಯಾಗಿದೆ.
ಹರಕೆ ಹೊತ್ತ ಭಕ್ತರು ಜಾತ್ರೆ ವೇಳೆ ಪ್ರಾಣಿಗಳನ್ನ ಬಲಿ ಕೊಡುವಾಗ ಅರ್ಚಕ ಪ್ರತಿ ಪ್ರಾಣಿಯನ್ನು ತನ್ನ ಹಲ್ಲಿನಿಂದ ಕಚ್ಚಿ ರಕ್ತ ಹೀರಿ ಕುಡಿಯುವುದು ತಲೆತಲಾಂತಗಳಿಂದ ನಡೆದುಕೊಂಡು ಬಂದಿದೆ. ಸಂಬಂಧಿಕರನ್ನು ಕರೆಸಿ ಬಲಿಕೊಟ್ಟ ಕುರಿಯಿಂದ ಖಾದ್ಯ ತಯಾರಿಸಿ ಉಣ ಬಡಿಸುತ್ತೇವೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.