ಕರ್ನಾಟಕ

karnataka

By

Published : Oct 3, 2020, 4:21 PM IST

Updated : Oct 3, 2020, 4:53 PM IST

ETV Bharat / state

ಆದಿತ್ಯನಾಥ್ ಸರ್ಕಾರ ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ: ಬಿಎಸ್​ಪಿ ಆಗ್ರಹ

ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ನಡೆದ ಅತ್ಯಾಚಾರವನ್ನು ಬಿಎಸ್​ಪಿ ಖಂಡಿಸುತ್ತದೆ. ಮೃತ ಹೆಣ್ಣುಮಗಳ ಅತ್ಯಾಸಂಸ್ಕಾರಕ್ಕೂ ಶವ ಕೊಡದ ಪೊಲೀಸರು ತಾವೇ ಸುಟ್ಟಿರುವುದು, ಸಾಕ್ಷ್ಯ ನಾಶದ ಪ್ರಯತ್ನ ಮಾಡಲಾಗಿದೆ. ಈ ಹಿನ್ನೆಲೆ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ‌ ನ್ಯಾಯ ಸಿಗುವವರೆಗೂ ಹೋರಾಟ‌ ಮಾಡುತ್ತೇವೆ ಎಂದು ಎಚ್ಚರಿಸಿದರು.

Protest in Kollegala
ಬಿಎಸ್​ಪಿ ಕಾರ್ಯಕರ್ತರ ಪ್ರತಿಭಟನೆ

ಕೊಳ್ಳೇಗಾಲ:ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಅತ್ಯಾಚಾರವನ್ನು ನಿಯಂತ್ರಿಸುವಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಕೂಡಲೇ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ತಾಲೂಕು‌ ಬಿಎಸ್​ಪಿ ಕಾರ್ಯಕರ್ತರು ಒತ್ತಾಯಿಸಿದರು.

ಬಿಎಸ್​ಪಿ ಕಾರ್ಯಕರ್ತರ ಪ್ರತಿಭಟನೆ

ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಾಗಿ ತಾಲೂಕು ‌ಕಚೇರಿ ಮುಂಭಾಗ ಸಮಾವೇಶಗೊಂಡ ಬಿಎಸ್​ಪಿ ಕಾರ್ಯಕರ್ತರು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ಯಪಡಿಸಿದರು. ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ನಡೆದ ಅತ್ಯಾಚಾರವನ್ನು ಬಿಎಸ್​ಪಿ ಖಂಡಿಸುತ್ತದೆ. ಮೃತ ಹೆಣ್ಣುಮಗಳ ಅತ್ಯಾಸಂಸ್ಕಾರಕ್ಕೂ ಶವ ಕೊಡದ ಪೊಲೀಸರು ತಾವೇ ಸುಟ್ಟಿರುವುದು. ಸಾಕ್ಷ್ಯ ನಾಶದ ಪ್ರಯತ್ನವಾಗಿದೆ. ಈ ಹಿನ್ನೆಲೆ ಸಂತ್ರಸ್ತೆ ಮತ್ತು ಆಕೆಯ ಕುಟುಂಬಕ್ಕೆ‌ ನ್ಯಾಯ ಸಿಗುವವರೆಗೂ ಹೋರಾಟ‌ ಮಾಡುತ್ತೇವೆ ಎಂದು ಎಚ್ಚರಿಸಿದರು.

ಇದೇ ವೇಳೆ, ಅಪರಾಧಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಉಸ್ತುವಾರಿ ತಹಶೀಲ್ದಾರ್ ಸುದರ್ಶನ್ ಅವರಿಗೆ ಮನವಿ ಪತ್ರಸಲ್ಲಿಸಿದರು. ಕೊಳ್ಳೇಗಾಲ ಬಿಎಸ್​ಪಿ ನಗರಸಭಾ ಸದಸ್ಯ ಜಯರಾಜ್ ಮಾತನಾಡಿ, ಹಥ್ರಾಸ್​ನಲ್ಲಿ ನಡೆದ ಅತ್ಯಾಚಾರವನ್ನು ನಾವು ಖಂಡಿಸುತ್ತೇವೆ. ಅಲ್ಲಿನ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ವೈದ್ಯಕೀಯ ಇಲಾಖೆ ಪ್ರಕರಣ ಸಾಕ್ಷ್ಯ ನಾಶಮಾಡಲು ಯತ್ನಿಸಿದೆ. ಉತ್ತರ‌ ಪ್ರದೇಶದಲ್ಲಿ ಹೆಚ್ಚು ಮಹಿಳಾ‌ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು.‌ ಅಲ್ಲಿನ ಬಿಜೆಪಿ ಸರ್ಕಾರ ಈ ಕೃತ್ಯಗಳ ನೈತಿಕ‌ಹೊಣೆ ಹೊರಬೇಕು. ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ತಪಿತಸ್ಥರಿಗೆ ಮರಣದಂಡನೆ ಶಿಕ್ಷೆ ನೀಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ತಾಲೂಕು ‌ಬಿಎಸ್​ಪಿ ಅಧ್ಯಕ್ಷ ರಾಜಶೇಖರ್ ತಿಳಿಸಿದರು.

Last Updated : Oct 3, 2020, 4:53 PM IST

ABOUT THE AUTHOR

...view details