ಕರ್ನಾಟಕ

karnataka

ETV Bharat / state

ವನ್ಯಜೀವಿ ಮಾಂಸ ಮಾರಾಟ: ಹೋಟೆಲ್​ ಮೇಲೆ ದಾಳಿ, ಉಡ, ಇತರೆ ಪ್ರಾಣಿಗಳ ರಕ್ಷಣೆ - ಉಡಗಳ ರಕ್ಷಣೆ

ವನ್ಯ ಜೀವಿಗಳು ಮತ್ತು ಮಾಂಸ ಮಾಂಸ ಮಾರಾಟ ಮಾಡುತ್ತಿದ್ದ ಹೋಟೆಲ್ ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿದೆ.

ಉಡಗಳ ರಕ್ಷಣೆ
ಉಡಗಳ ರಕ್ಷಣೆ

By

Published : May 12, 2022, 8:17 AM IST

ಚಿಕ್ಕಬಳ್ಳಾಪುರ: ವನ್ಯ ಜೀವಿಗಳನ್ನು ಬಂಧಿಸಿಟ್ಟು ಸಾಕುವುದಲ್ಲದೆ ಮಾಂಸ ಮಾರಾಟ ಮಾಡುತ್ತಿದ್ದ ಹೋಟೆಲ್ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಜೀವಂತ ಉಡಗಳು ಸೇರಿ ಇತರ ಪ್ರಾಣಿಗಳನ್ನು ರಕ್ಷಿಸಲಾಗಿದೆ.

ಚೇಳೂರಿನ ಸರ್ಕಾರಿ ಕಾಲೇಜು ರಸ್ತೆಯ ಬದಿಯಲ್ಲಿ ಹೋಟೆಲ್​ ಇಟ್ಟುಕೊಂಡಿದ್ದ ಇಸ್ಮಾಯಿಲ್ ಬಂಧಿತ ಪ್ರಮುಖ ಆರೋಪಿ. ಈತನ ಹೋಟೆಲ್‍ನಲ್ಲಿ ಎಲ್ಲಿಯೂ ಸಿಗದ ಮಾಂಸದೂಟ ಸಿಗುತ್ತಿತ್ತು. ಅಲ್ಲದೆ, ಈತ ಕಾಡುಪ್ರಾಣಿ, ಪಕ್ಷಿಗಳನ್ನು ಜೀವಂತವಾಗಿ ಕಾಡಿನಿಂದ ತರಿಸಿ ಸಾಕಾಣಿಕೆ ಮಾಡುತ್ತಿದ್ದ. ಬಳಿಕ ಭಾರಿ ಬೆಲೆಗೆ ಪ್ರಾಣಿಗಳು ಮತ್ತು ಮಾಂಸವನ್ನು ಮಾರಾಟ ಮಾಡುತ್ತಿದ್ದ.


ಈ ಬಗ್ಗೆ ರಾಜ್ಯ ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಹೋಟೆಲ್ ಮುಂದೆ ಅಧಿಕಾರಿಗಳು ಹೊಂಚು ಹಾಕಿ ಕುಳಿತಿದ್ದರು. ಇದೇ ಸಮಯಕ್ಕೆ ಹಕ್ಕಿ-ಪಿಕ್ಕಿ ಜನಾಂಗದ ವ್ಯಕ್ತಿಯೋರ್ವ ವನ್ಯ ಪ್ರಾಣಿಗಳನ್ನು ಎತ್ತಿಕೊಂಡು ಬಂದು ಮಾಲೀಕನಿಗೆ ಕೊಡುತ್ತಿದ್ದಂತೆ, ಬೆಂಗಳೂರು ಜಾಲಹಳ್ಳಿ ಸಂಚಾರಿ ದಳದ ಅಧಿಕಾರಿಗಳು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ.

ಮಾಲೀಕ ಇಸ್ಮಾಯಿಲ್, ಹಕ್ಕಿ-ಪಿಕ್ಕಿ ವ್ಯಕ್ತಿ, ಹೋಟೆಲ್​ ಕೆಲಸಗಾರ ಬಾಬಾಜಾನ್ ಸೇರಿ ಇತರರನ್ನು ಬಂಧಿಸಲಾಗಿದೆ. ಹೋಟೆಲ್‍ ಪರೀಶೀಲಿಸಿ ಉಡಗಳು, ಇತರೆ ವನ್ಯ ಜೀವಿಗಳನ್ನು ರಕ್ಷಿಸಲಾಗಿದೆ. ವನ್ಯ ಜೀವಿಗಳ ಮಾರಾಟ ಮತ್ತು ಪ್ರಾಣಿ ವಧೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತಾಯಿ ಕೊಂದ ಕೆಂಪು ಗೂಟದ ವಾಹನ; ಪ್ರತೀಕಾರಕ್ಕಾಗಿ ಹವಣಿಸುತ್ತಿದೆ ಈ ಶ್ವಾನ!

ABOUT THE AUTHOR

...view details