ಚಾಮರಾಜನಗರ: ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಬಿಜೆಪಿ ಕಾರ್ಯಕರ್ತರು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಕಟುಕರ ಪಾಲಾಗುತ್ತಿದ್ದ ಗೋವುಗಳ ರಕ್ಷಣೆ: ಪ್ರಕರಣದಲ್ಲಿ ಪೊಲೀಸರ ಪಾತ್ರ ಶಂಕೆ - ಚಾಮರಾಜನಗರ
ಗುರುವಾರ ಮಧ್ಯಾಹ್ನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಸುಮಾರು 50 ಕ್ಕೂ ಹೆಚ್ಚು ಜಾನುವಾರುಗಳನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಕೇವಲ 9 ಜಾನುವಾರುಗಳೆಂದು ಕೇಸು ಹಾಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
![ಕಟುಕರ ಪಾಲಾಗುತ್ತಿದ್ದ ಗೋವುಗಳ ರಕ್ಷಣೆ: ಪ್ರಕರಣದಲ್ಲಿ ಪೊಲೀಸರ ಪಾತ್ರ ಶಂಕೆ](https://etvbharatimages.akamaized.net/etvbharat/prod-images/768-512-3812723-thumbnail-3x2-giri.jpg)
ಕಟುಕರ ಪಾಲಾಗಿದ್ದ ಗೋವುಗಳನ್ನು ರಕ್ಷಿಸಿದ ಯುವಕರು
ಕಟುಕರ ಪಾಲಾಗಿದ್ದ ಗೋವುಗಳನ್ನು ರಕ್ಷಿಸಿದ ಯುವಕರು
ಗುರುವಾರ ಮಧ್ಯಾಹ್ನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಸುಮಾರು 50 ಕ್ಕೂ ಹೆಚ್ಚು ಜಾನುವಾರುಗಳನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಕೇವಲ 9 ಜಾನುವಾರಿಗೆ ಕೇಸು ಹಾಕಿದ್ದು, ಪ್ರಕರಣದಲ್ಲಿ ಪೊಲೀಸರ ಪಾತ್ರದ ಶಂಕೆ ವ್ಯಕ್ತವಾಗಿದೆ.
ಕೇರಳಕ್ಕೆ ನಿರಂತರವಾಗಿ ಅಕ್ರಮ ಜಾನುವಾರು ಸಾಗಾಣಿಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.